ಕ್ರೀಡೆ

ನಾಳೆಯಿಂದ ಭಾರತ vs ಇಂಗ್ಲೆಂಡ್‌ ಮೊದಲ ಟೆಸ್ಟ್:‌ ನೇರಪ್ರಸಾರ, ಸಂಭಾವ್ಯ ಆಡುವ ಬಳಗದ ಮಾಹಿತಿ

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್‌ ತಂಡ 5 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದೆ. ನಾಳೆ ( ಜನವರಿ 25 ) ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದ‌ಲ್ಲಿ ಬೆಳಗ್ಗೆ 9.30ಕ್ಕೆ ಮೊದಲ ಟೆಸ್ಟ್‌ ಪಂದ್ಯ ಆರಂಭಗೊಳ್ಳಲಿದ್ದು, ನಂತರದ ಪಂದ್ಯಗಳು ಕ್ರಮವಾಗಿ ವಿಶಾಖಪಟ್ಟಣ, ರಾಜ್‌ಕೋಟ್‌, ರಾಂಚಿ ಹಾಗೂ ಧರ್ಮಶಾಲಾ ಕ್ರಿಕೆಟ್‌ ಕ್ರೀಡಾಂಗಣಗಳಲ್ಲಿ ನಡೆಯಲಿವೆ.

ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಟೀಮ್‌ ಇಂಡಿಯಾ ಕಣಕ್ಕಿಳಿಯಲಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ವಿರಾಟ್‌ ಕೊಹ್ಲಿ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್‌ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. 16 ಆಟಗಾರರ ತಂಡ ಪ್ರಕಟಗೊಂಡಿದ್ದು, ಜಸ್‌ಪ್ರೀತ್‌ ಬುಮ್ರಾ ಉಪನಾಯಕನ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್‌ ತಂಡಗಳ ನಡುವಿನ ಟೆಸ್ಟ್‌ ಸರಣಿಯ ನೇರಪ್ರಸಾರ ಸ್ಪೋರ್ಟ್ಸ್‌ 18 ಚಾನೆಲ್‌ನಲ್ಲಿ ಹಾಗೂ ಜಿಯೊ ಸಿನಿಮಾ ಒಟಿಟಿಯಲ್ಲಿ ಲಭ್ಯವಿರಲಿದೆ. ಇಂಗ್ಲೆಂಡ್‌ ಕೊನೆಯದಾಗಿ ಭಾರತದ ನೆಲದಲ್ಲಿ ಟೆಸ್ಟ್‌ ಸರಣಿ ಗೆದ್ದದ್ದು 2012ರಲ್ಲಿ, ಅಲಸ್ಟೇರ್‌ ಕುಕ್‌ ನಾಯಕನಾಗಿದ್ದಾಗ. ಇದಾದ ಬಳಿಕ ಸತತ 11 ವರ್ಷಗಳ ಕಾಲ ಭಾರತ ಸೋಲನ್ನೇ ಕಂಡಿಲ್ಲ.

ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್‌ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲೆ, ಮಾರ್ಕ್ ವುಡ್, ಜ್ಯಾಕ್ ಲೀಚ್

ಭಾರತದ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್‌ ಭರತ್, ರವಿಚಂದ್ರನ್‌ ಅಶ್ವಿನ್, ರವೀಂದ್ರ ಜಡೇಜಾ,‌ ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಕುಲದೀಪ್ ಯಾದವ್

 

andolana

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

10 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

27 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

40 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago