ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ನಾಳೆ ( ಜನವರಿ 25 ) ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬೆಳಗ್ಗೆ 9.30ಕ್ಕೆ ಮೊದಲ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದ್ದು, ನಂತರದ ಪಂದ್ಯಗಳು ಕ್ರಮವಾಗಿ ವಿಶಾಖಪಟ್ಟಣ, ರಾಜ್ಕೋಟ್, ರಾಂಚಿ ಹಾಗೂ ಧರ್ಮಶಾಲಾ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ನಡೆಯಲಿವೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ವಿರಾಟ್ ಕೊಹ್ಲಿ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. 16 ಆಟಗಾರರ ತಂಡ ಪ್ರಕಟಗೊಂಡಿದ್ದು, ಜಸ್ಪ್ರೀತ್ ಬುಮ್ರಾ ಉಪನಾಯಕನ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಯ ನೇರಪ್ರಸಾರ ಸ್ಪೋರ್ಟ್ಸ್ 18 ಚಾನೆಲ್ನಲ್ಲಿ ಹಾಗೂ ಜಿಯೊ ಸಿನಿಮಾ ಒಟಿಟಿಯಲ್ಲಿ ಲಭ್ಯವಿರಲಿದೆ. ಇಂಗ್ಲೆಂಡ್ ಕೊನೆಯದಾಗಿ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದದ್ದು 2012ರಲ್ಲಿ, ಅಲಸ್ಟೇರ್ ಕುಕ್ ನಾಯಕನಾಗಿದ್ದಾಗ. ಇದಾದ ಬಳಿಕ ಸತತ 11 ವರ್ಷಗಳ ಕಾಲ ಭಾರತ ಸೋಲನ್ನೇ ಕಂಡಿಲ್ಲ.
ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲೆ, ಮಾರ್ಕ್ ವುಡ್, ಜ್ಯಾಕ್ ಲೀಚ್
ಭಾರತದ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಕುಲದೀಪ್ ಯಾದವ್
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…