ಕ್ರೀಡೆ

ನಾಳೆಯಿಂದ ಭಾರತ vs ಇಂಗ್ಲೆಂಡ್‌ ಮೊದಲ ಟೆಸ್ಟ್:‌ ನೇರಪ್ರಸಾರ, ಸಂಭಾವ್ಯ ಆಡುವ ಬಳಗದ ಮಾಹಿತಿ

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್‌ ತಂಡ 5 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದೆ. ನಾಳೆ ( ಜನವರಿ 25 ) ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದ‌ಲ್ಲಿ ಬೆಳಗ್ಗೆ 9.30ಕ್ಕೆ ಮೊದಲ ಟೆಸ್ಟ್‌ ಪಂದ್ಯ ಆರಂಭಗೊಳ್ಳಲಿದ್ದು, ನಂತರದ ಪಂದ್ಯಗಳು ಕ್ರಮವಾಗಿ ವಿಶಾಖಪಟ್ಟಣ, ರಾಜ್‌ಕೋಟ್‌, ರಾಂಚಿ ಹಾಗೂ ಧರ್ಮಶಾಲಾ ಕ್ರಿಕೆಟ್‌ ಕ್ರೀಡಾಂಗಣಗಳಲ್ಲಿ ನಡೆಯಲಿವೆ.

ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಟೀಮ್‌ ಇಂಡಿಯಾ ಕಣಕ್ಕಿಳಿಯಲಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ವಿರಾಟ್‌ ಕೊಹ್ಲಿ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್‌ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. 16 ಆಟಗಾರರ ತಂಡ ಪ್ರಕಟಗೊಂಡಿದ್ದು, ಜಸ್‌ಪ್ರೀತ್‌ ಬುಮ್ರಾ ಉಪನಾಯಕನ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್‌ ತಂಡಗಳ ನಡುವಿನ ಟೆಸ್ಟ್‌ ಸರಣಿಯ ನೇರಪ್ರಸಾರ ಸ್ಪೋರ್ಟ್ಸ್‌ 18 ಚಾನೆಲ್‌ನಲ್ಲಿ ಹಾಗೂ ಜಿಯೊ ಸಿನಿಮಾ ಒಟಿಟಿಯಲ್ಲಿ ಲಭ್ಯವಿರಲಿದೆ. ಇಂಗ್ಲೆಂಡ್‌ ಕೊನೆಯದಾಗಿ ಭಾರತದ ನೆಲದಲ್ಲಿ ಟೆಸ್ಟ್‌ ಸರಣಿ ಗೆದ್ದದ್ದು 2012ರಲ್ಲಿ, ಅಲಸ್ಟೇರ್‌ ಕುಕ್‌ ನಾಯಕನಾಗಿದ್ದಾಗ. ಇದಾದ ಬಳಿಕ ಸತತ 11 ವರ್ಷಗಳ ಕಾಲ ಭಾರತ ಸೋಲನ್ನೇ ಕಂಡಿಲ್ಲ.

ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್‌ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲೆ, ಮಾರ್ಕ್ ವುಡ್, ಜ್ಯಾಕ್ ಲೀಚ್

ಭಾರತದ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್‌ ಭರತ್, ರವಿಚಂದ್ರನ್‌ ಅಶ್ವಿನ್, ರವೀಂದ್ರ ಜಡೇಜಾ,‌ ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಕುಲದೀಪ್ ಯಾದವ್

 

andolana

Recent Posts

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

2 hours ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

5 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

6 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

7 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

7 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

12 hours ago