ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ನಾಳೆ ( ಜನವರಿ 25 ) ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬೆಳಗ್ಗೆ 9.30ಕ್ಕೆ ಮೊದಲ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದ್ದು, ನಂತರದ ಪಂದ್ಯಗಳು ಕ್ರಮವಾಗಿ ವಿಶಾಖಪಟ್ಟಣ, ರಾಜ್ಕೋಟ್, ರಾಂಚಿ ಹಾಗೂ ಧರ್ಮಶಾಲಾ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ನಡೆಯಲಿವೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ವಿರಾಟ್ ಕೊಹ್ಲಿ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. 16 ಆಟಗಾರರ ತಂಡ ಪ್ರಕಟಗೊಂಡಿದ್ದು, ಜಸ್ಪ್ರೀತ್ ಬುಮ್ರಾ ಉಪನಾಯಕನ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಯ ನೇರಪ್ರಸಾರ ಸ್ಪೋರ್ಟ್ಸ್ 18 ಚಾನೆಲ್ನಲ್ಲಿ ಹಾಗೂ ಜಿಯೊ ಸಿನಿಮಾ ಒಟಿಟಿಯಲ್ಲಿ ಲಭ್ಯವಿರಲಿದೆ. ಇಂಗ್ಲೆಂಡ್ ಕೊನೆಯದಾಗಿ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದದ್ದು 2012ರಲ್ಲಿ, ಅಲಸ್ಟೇರ್ ಕುಕ್ ನಾಯಕನಾಗಿದ್ದಾಗ. ಇದಾದ ಬಳಿಕ ಸತತ 11 ವರ್ಷಗಳ ಕಾಲ ಭಾರತ ಸೋಲನ್ನೇ ಕಂಡಿಲ್ಲ.
ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಜಾನಿ ಬೈರ್ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲೆ, ಮಾರ್ಕ್ ವುಡ್, ಜ್ಯಾಕ್ ಲೀಚ್
ಭಾರತದ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಕುಲದೀಪ್ ಯಾದವ್
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…