ಕ್ರೀಡೆ

ವಿಶ್ವಕಪ್‌ ಸೆಮಿಫೈನಲ್:‌ ಭಾರತ vs ನ್ಯೂಜಿಲೆಂಡ್‌ ಪಂದ್ಯದ ಅಂಪೈರ್‌ಗಳ ಘೋಷಣೆ

ಕಳೆದ ಅಕ್ಟೋಬರ್‌ 5ರಂದು ಆರಂಭವಾದ ಪ್ರತಿಷ್ಟಿತ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಮುಕ್ತಾಯದ ಸನಿಹಕ್ಕೆ ಬಂದಿದೆ. ಒಟ್ಟು ಹತ್ತು ತಂಡಗಳು ಭಾಗವಹಿಸಿದ್ದ ಈ ಟೂರ್ನಿ ಈ ಬಾರಿ ಭಾರತ ನೆಲದಲ್ಲಿ ಜರುಗುತ್ತಿದೆ. ಈ ಪೈಕಿ ಟೀಮ್‌ ಇಂಡಿಯಾ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ನಾಕ್‌ಔಟ್‌ ಸುತ್ತಿಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದ್ದು, ಉಳಿದ ಆರು ತಂಡಗಳು ಲೀಗ್‌ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿವೆ.

ಇನ್ನು ಒಂದನೇ ಸೆಮಿ ಫೈನಲ್‌ ಪಂದ್ಯ ನವೆಂಬರ್‌ 15ರಂದು ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಜರುಗಲಿದ್ದು, ಟೂರ್ನಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಟೀಮ್‌ ಇಂಡಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದು, ನವೆಂಬರ್‌ 16ರಂದು ಕೊಲ್ಕತ್ತಾದ ಈಡನ್‌ ಗಾರ್ಡನ್ಸ್‌ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ.

ಈ ಎರಡು ಪಂದ್ಯಗಳಲ್ಲಿ ಗೆಲ್ಲಲಿರುವ ತಂಡಗಳು ಫೈನಲ್‌ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು, ನವೆಂಬರ್‌ 19ರ ಭಾನುವಾರದಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ.

ಇನ್ನು ಟೂರ್ನಿಯಲ್ಲಿ ಆಡಿದ ಎಲ್ಲಾ ಲೀಗ್‌ ಪಂದ್ಯಗಳಲ್ಲಿಯೂ ಜಯ ಸಾಧಿಸಿರುವ ಟೀಮ್‌ ಇಂಡಿಯಾ ನ್ಯೂಜಿಲೆಂಡ್‌ ತಂಡದ ವಿರುದ್ಧ ಗೆದ್ದು ಕಳೆದ ವಿಶ್ವಕಪ್‌ನ ಸೆಮಿಫೈನಲ್‌ ಸೋಲಿನ ಸೇಡನ್ನು ತೀರಿಸಿಕೊಳ್ಳಲಿದೆಯಾ ಎಂಬ ಕುತೂಹಲ ಮೂಡಿದ್ದು, ಸದ್ಯ ಎಲ್ಲೆಡೆ ಪಂದ್ಯದ ಕುರಿತ ಚರ್ಚೆಗಳು ಜೋರಾಗಿವೆ. ಈ ಪಂದ್ಯಕ್ಕೆ ಆನ್‌ಫೀಲ್ಡ್‌ ಹಾಗೂ ಥರ್ಡ್‌ ಅಂಪೈರಿಂಗ್ ಯಾರು ಮಾಡಲಿದ್ದಾರೆ ಎಂಬ ಮಾಹಿತಿಯೂ ಸಹ ಹೊರಬಿದ್ದಿದೆ. ಆನ್‌ಫೀಲ್ಡ್‌ ಅಂಪೈರ್‌ಗಳಾಗಿ ರಿಚರ್ಡ್‌ ಇಲ್ಲಿಂಗ್‌ವರ್ಥ್‌ ಹಾಗೂ ರಾಡ್‌ ಟಕ್ಕರ್‌ ಕಣಕ್ಕಿಳಿಯಲಿದ್ದರೆ, ಥರ್ಡ್‌ ಅಂಪೈರ್‌ ಆಗಿ ಜ್ಯೋಲ್‌ ವಿಲ್‌ಸನ್‌ ಜವಾಬ್ದಾರಿ ಹೊರಲಿದ್ದಾರೆ.

andolana

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

3 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

3 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

3 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

3 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

3 hours ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

3 hours ago