ಕ್ರೀಡೆ

ಇಂದಿನಿಂದ ಭಾರತ vs ದಕ್ಷಿಣ ಆಫ್ರಿಕಾ ಟಿ20 ಸರಣಿ: ಮುಖಾಮುಖಿಯಲ್ಲಿ ಯಾವ ತಂಡ ಬಲಿಷ್ಠ?

ಏಕದಿನ ವಿಶ್ವಕಪ್‌ ಮುಗಿದ ಬಳಿಕ ತವರು ನೆಲದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ ನಡೆಸಿ ಸರಣಿ ಗೆದ್ದಿದ್ದ ಟೀಮ್‌ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದು ಹರಿಣಗಳ ವಿರುದ್ಧ 3 ಪಂದ್ಯಗಳ ಟಿ 20 ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಸೆಣಸಾಟ ನಡೆಸುತ್ತಿದೆ.

ಇಂದು ( ಡಿಸೆಂಬರ್‌ 10 ) ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಡರ್ಬನ್‌ನ ಕಿಂಗ್ಸ್‌ಮೆಡ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಪ್ರಥಮ ಟಿ 20 ಪಂದ್ಯವನ್ನಾಡಲಿವೆ. ಈ ಟಿ 20 ಸರಣಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್‌ ಯಾದವ್‌ ನಾಯಕನಾಗಿ ಮುನ್ನಡೆಸಲಿದ್ದು, ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿದಿದ್ದ ಯುವ ಭಾರತ ತಂಡವೇ ಈ ಸರಣಿಯಲ್ಲಿ ಕಣಕ್ಕಿಳಿಯಲಿದೆ.

ಪಂದ್ಯ ಎಷ್ಟು ಗಂಟೆಗೆ ಶುರುವಾಗಲಿದೆ, ನೇರಪ್ರಸಾರ ಯಾವ ಚಾನೆಲ್‌ನಲ್ಲಿ ಲಭ್ಯ, ಇತ್ತಂಡಗಳ ನಡುವಿನ ಟಿ ಟ್ವೆಂಟಿ ಮುಖಾಮುಖಿಯಲ್ಲಿ ಯಾವ ತಂಡ ಬಲಿಷ್ಠ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಈ ಪಂದ್ಯ ಸಂಜೆ 7.30ಕ್ಕೆ ಶುರುವಾಗಲಿದ್ದು, ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ನೇರಪ್ರಸಾರವಾಗಲಿದೆ ಹಾಗೂ ಡಿಸ್ನೆ ಪ್ಲಸ್‌ ಹಾಟ್‌ಸ್ಟಾರ್‌ ಓಟಿಟಿಯಲ್ಲೂ ಲಭ್ಯವಿದೆ. ಎರಡೂ ತಂಡಗಳು ಇಲ್ಲಿಯವರೆಗೂ ಒಟ್ಟು 24 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಭಾರತ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ, ದಕ್ಷಿಣ ಆಫ್ರಿಕಾ 10 ಪಂದ್ಯಗಳಲ್ಲಿ ಗೆದ್ದಿದೆ ಮತ್ತು ಉಳಿದೊಂದು ಪಂದ್ಯ ಯಾವುದೇ ಫಲಿತಾಂಶದಲ್ಲಿ ಅಂತ್ಯಗೊಂಡಿದೆ. ಡರ್ಬನ್‌ನ ಕಿಂಗ್ಸ್‌ಮೇಡ್‌ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೂ ನಡೆದಿರುವ ಯಾವುದೇ ಟಿ ಟ್ವೆಂಟಿ ಪಂದ್ಯದಲ್ಲಿಯೂ ಟೀಮ್‌ ಇಂಡಿಯಾ ಸೋಲದಿರುವ ಇತಿಹಾಸ ಹೊಂದಿದೆ. 

andolana

Recent Posts

ಗೋವಾ ಅವಘಡ : ಭಾರತದಿಂದ ಪರಾರಿಯಾದ ಲುತ್ರಾ ಸೋದರರು ಥಾಯ್ಲೆಂಡ್‌ನಲ್ಲಿ ವಶಕ್ಕೆ

ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…

3 mins ago

ಡೀಮ್ಡ್‌ ಅರಣ್ಯ ಪ್ರದೇಶ ಗುರುತಿಸುವಿಕೆಗೆ ಸಮಿತಿ ರಚನೆ : ಈಶ್ವರ ಖಂಡ್ರೆ

ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…

35 mins ago

ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…

38 mins ago

ಕ್ರೀಡಾ ನೇಮಕಾತಿ ಮೀಸಲಾತಿ ಅನುಷ್ಠಾನ : ಸಿಎಂ ಘೋಷಣೆ

ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…

43 mins ago

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

49 mins ago

ಹೊಸದಿಲ್ಲಿ : ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ ೧೧ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…

52 mins ago