ಕ್ರೀಡೆ

ಇಂದಿನಿಂದ ಭಾರತ vs ದಕ್ಷಿಣ ಆಫ್ರಿಕಾ ಟಿ20 ಸರಣಿ: ಮುಖಾಮುಖಿಯಲ್ಲಿ ಯಾವ ತಂಡ ಬಲಿಷ್ಠ?

ಏಕದಿನ ವಿಶ್ವಕಪ್‌ ಮುಗಿದ ಬಳಿಕ ತವರು ನೆಲದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ ನಡೆಸಿ ಸರಣಿ ಗೆದ್ದಿದ್ದ ಟೀಮ್‌ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದು ಹರಿಣಗಳ ವಿರುದ್ಧ 3 ಪಂದ್ಯಗಳ ಟಿ 20 ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಸೆಣಸಾಟ ನಡೆಸುತ್ತಿದೆ.

ಇಂದು ( ಡಿಸೆಂಬರ್‌ 10 ) ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಡರ್ಬನ್‌ನ ಕಿಂಗ್ಸ್‌ಮೆಡ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಪ್ರಥಮ ಟಿ 20 ಪಂದ್ಯವನ್ನಾಡಲಿವೆ. ಈ ಟಿ 20 ಸರಣಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್‌ ಯಾದವ್‌ ನಾಯಕನಾಗಿ ಮುನ್ನಡೆಸಲಿದ್ದು, ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿದಿದ್ದ ಯುವ ಭಾರತ ತಂಡವೇ ಈ ಸರಣಿಯಲ್ಲಿ ಕಣಕ್ಕಿಳಿಯಲಿದೆ.

ಪಂದ್ಯ ಎಷ್ಟು ಗಂಟೆಗೆ ಶುರುವಾಗಲಿದೆ, ನೇರಪ್ರಸಾರ ಯಾವ ಚಾನೆಲ್‌ನಲ್ಲಿ ಲಭ್ಯ, ಇತ್ತಂಡಗಳ ನಡುವಿನ ಟಿ ಟ್ವೆಂಟಿ ಮುಖಾಮುಖಿಯಲ್ಲಿ ಯಾವ ತಂಡ ಬಲಿಷ್ಠ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಈ ಪಂದ್ಯ ಸಂಜೆ 7.30ಕ್ಕೆ ಶುರುವಾಗಲಿದ್ದು, ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ನೇರಪ್ರಸಾರವಾಗಲಿದೆ ಹಾಗೂ ಡಿಸ್ನೆ ಪ್ಲಸ್‌ ಹಾಟ್‌ಸ್ಟಾರ್‌ ಓಟಿಟಿಯಲ್ಲೂ ಲಭ್ಯವಿದೆ. ಎರಡೂ ತಂಡಗಳು ಇಲ್ಲಿಯವರೆಗೂ ಒಟ್ಟು 24 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಭಾರತ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ, ದಕ್ಷಿಣ ಆಫ್ರಿಕಾ 10 ಪಂದ್ಯಗಳಲ್ಲಿ ಗೆದ್ದಿದೆ ಮತ್ತು ಉಳಿದೊಂದು ಪಂದ್ಯ ಯಾವುದೇ ಫಲಿತಾಂಶದಲ್ಲಿ ಅಂತ್ಯಗೊಂಡಿದೆ. ಡರ್ಬನ್‌ನ ಕಿಂಗ್ಸ್‌ಮೇಡ್‌ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೂ ನಡೆದಿರುವ ಯಾವುದೇ ಟಿ ಟ್ವೆಂಟಿ ಪಂದ್ಯದಲ್ಲಿಯೂ ಟೀಮ್‌ ಇಂಡಿಯಾ ಸೋಲದಿರುವ ಇತಿಹಾಸ ಹೊಂದಿದೆ. 

andolana

Recent Posts

ಮಂಡ್ಯ | ಬುದನೂರು ಉತ್ಸವದಲ್ಲಿ 3 ದಿನ ಹೆಲಿ ಟೂರಿಸಂ

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…

2 mins ago

ಅದ್ಧೂರಿಯಾಗಿ ಬೂದನೂರು ಉತ್ಸವ ಆಚರಣೆ : ಪಿ.ರವಿಕುಮಾರ್

ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು…

17 mins ago

ಬಾಲ ನಟ, ನಟಿ : ಜಿಲ್ಲಾಧಿಕಾರಿಯಿಂದ ಅನುಮತಿ ಕಡ್ಡಾಯ

ಮೈಸೂರು : ಚಲನಚಿತ್ರಗಳು, ಧಾರಾವಾಹಿಗಳು, ಟಿವಿ ಕಾರ್ಯಕ್ರಮಗಳು, ಜಾಹೀರಾತುಗಳು ಹಾಗೂ ಇತರ ವಾಣಿಜ್ಯ ಶ್ರವಣ-ದೃಶ್ಯ ಮಾಧ್ಯಮಗಳಲ್ಲಿ ಮಕ್ಕಳು (ಬಾಲ ಕಲಾವಿದರು)…

35 mins ago

ಗ್ರಾಮ ಪಂಚಾಯ್ತಿ ಚುನಾವಣೆ : ಸಿದ್ಧತೆಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸರ್ಕಾರ

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…

2 hours ago

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದು ಗಾಂಧಿಜೀ : ಸಿಎಂ

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…

2 hours ago

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

4 hours ago