ಕ್ರೀಡೆ

IND vs SA 1st Test: ಕೆಎಲ್‌ ರಾಹುಲ್‌ ಶತಕ; ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 245ಕ್ಕೆ ಆಲ್‌ಔಟ್‌

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್‌ ತಂಡ ಸದ್ಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ನಿನ್ನೆಯಿಂದ ( ಡಿಸೆಂಬರ್‌ 26 ) ಸೆಂಚುರಿಯನ್‌ನ ಸೂಪರ್‌ ಸ್ಪೋರ್ಟ್‌ ಪಾರ್ಕ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯ ಆರಂಭಗೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್‌ ಮಾಡಿ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್‌ಗಳಿಗೆ ಆಲ್‌ಔಟ್‌ ಆಗಿದೆ.

ಮೊದಲ ದಿನದಾಟ ಸಂಪೂರ್ಣವಾಗಿ ಮುಗಿಯುವ ಮುನ್ನವೇ ಮಳೆ ಬಂದ ಕಾರಣ 59 ಓವರ್‌ಗಳು ಮಾತ್ರ ನಡೆದು 8 ವಿಕೆಟ್‌ ನಷ್ಟಕ್ಕೆ 208 ರನ್‌ ಕಲೆಹಾಕಿದ್ದ ಟೀಮ್‌ ಇಂಡಿಯಾ ಎರಡನೇ ದಿನದಾಟ ಆರಂಭವಾದ ಬಳಿಕ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್‌ಗಳಿಗೆ ಆಲ್‌ಔಟ್‌ ಆಗಿದೆ.

ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ಎಲ್ಲಾ ಬ್ಯಾಟ್ಸ್‌ಮನ್‌ಗಳೂ ಕೈಕೊಟ್ಟಿದ್ದು ಕೆಎಲ್‌ ರಾಹುಲ್‌ ತಂಡಕ್ಕೆ ಆಪದ್ಬಾಂಧವನಾಗಿ ನಿಂತಿದ್ದಾರೆ. 137 ಎಸೆತಗಳನ್ನು ಎದುರಿಸಿದ ಕೆಎಲ್‌ ರಾಹುಲ್‌ 101 ರನ್‌ ಬಾರಿಸಿದರು.

ಭಾರತದ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್‌ ಹಾಗೂ ರೋಹಿತ್‌ ಶರ್ಮಾ ಕಣಕ್ಕಿಳಿದರು. ಜೈಸ್ವಾಲ್‌ 17 ರನ್‌ ಗಳಿಸಿದರೆ, ನಾಯಕ ರೋಹಿತ್‌ ಶರ್ಮಾ ಕೇವಲ 5 ರನ್‌ಗಳಿಗೆ ಔಟ್‌ ಆದರು. ಇನ್ನುಳಿದಂತೆ ಶುಭ್‌ಮನ್‌ ಗಿಲ್‌ 2, ವಿರಾಟ್‌ ಕೊಹ್ಲಿ 38, ಶ್ರೇಯಸ್‌ ಅಯ್ಯರ್‌ 31, ರವಿಚಂದ್ರನ್‌ ಅಶ್ವಿನ್‌ 8, ಶಾರ್ದೂಲ್‌ ಠಾಕೂರ್‌ 24, ಜಸ್‌ಪ್ರೀತ್‌ ಬುಮ್ರಾ ಕೇವಲ 1 ರನ್‌, ಮೊಹಮ್ಮದ್‌ ಸಿರಾಜ್‌ 5 ಹಾಗೂ ಪ್ರಸಿದ್ಧ್‌ ಕೃಷ್ಣ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ಸೌತ್‌ ಆಫ್ರಿಕಾ ಪರ ಕಗಿಸೊ ರಬಾಡಾ 5 ವಿಕೆಟ್‌ ಪಡೆದು ಮಿಂಚಿದರೆ, ನಾಂದ್ರೆ ಬರ್ಗರ್‌ 3, ಗೆರಾಲ್ಡ್‌ ಕೊಯೆಟ್ಜಿ ಹಾಗೂ ಮಾರ್ಕೊ ಯಾನ್‌ಸೆನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

andolana

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago