ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್ ತಂಡ ಸದ್ಯ ಮೊದಲ ಟೆಸ್ಟ್ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ನಿನ್ನೆಯಿಂದ ( ಡಿಸೆಂಬರ್ 26 ) ಸೆಂಚುರಿಯನ್ನ ಸೂಪರ್ ಸ್ಪೋರ್ಟ್ ಪಾರ್ಕ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭಗೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್ ಮಾಡಿ ಮೊದಲ ಇನ್ನಿಂಗ್ಸ್ನಲ್ಲಿ 245 ರನ್ಗಳಿಗೆ ಆಲ್ಔಟ್ ಆಗಿದೆ.
ಮೊದಲ ದಿನದಾಟ ಸಂಪೂರ್ಣವಾಗಿ ಮುಗಿಯುವ ಮುನ್ನವೇ ಮಳೆ ಬಂದ ಕಾರಣ 59 ಓವರ್ಗಳು ಮಾತ್ರ ನಡೆದು 8 ವಿಕೆಟ್ ನಷ್ಟಕ್ಕೆ 208 ರನ್ ಕಲೆಹಾಕಿದ್ದ ಟೀಮ್ ಇಂಡಿಯಾ ಎರಡನೇ ದಿನದಾಟ ಆರಂಭವಾದ ಬಳಿಕ ಮೊದಲ ಇನ್ನಿಂಗ್ಸ್ನಲ್ಲಿ 245 ರನ್ಗಳಿಗೆ ಆಲ್ಔಟ್ ಆಗಿದೆ.
ಭಾರತದ ಮೊದಲ ಇನ್ನಿಂಗ್ಸ್ನಲ್ಲಿ ಎಲ್ಲಾ ಬ್ಯಾಟ್ಸ್ಮನ್ಗಳೂ ಕೈಕೊಟ್ಟಿದ್ದು ಕೆಎಲ್ ರಾಹುಲ್ ತಂಡಕ್ಕೆ ಆಪದ್ಬಾಂಧವನಾಗಿ ನಿಂತಿದ್ದಾರೆ. 137 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 101 ರನ್ ಬಾರಿಸಿದರು.
ಭಾರತದ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿದರು. ಜೈಸ್ವಾಲ್ 17 ರನ್ ಗಳಿಸಿದರೆ, ನಾಯಕ ರೋಹಿತ್ ಶರ್ಮಾ ಕೇವಲ 5 ರನ್ಗಳಿಗೆ ಔಟ್ ಆದರು. ಇನ್ನುಳಿದಂತೆ ಶುಭ್ಮನ್ ಗಿಲ್ 2, ವಿರಾಟ್ ಕೊಹ್ಲಿ 38, ಶ್ರೇಯಸ್ ಅಯ್ಯರ್ 31, ರವಿಚಂದ್ರನ್ ಅಶ್ವಿನ್ 8, ಶಾರ್ದೂಲ್ ಠಾಕೂರ್ 24, ಜಸ್ಪ್ರೀತ್ ಬುಮ್ರಾ ಕೇವಲ 1 ರನ್, ಮೊಹಮ್ಮದ್ ಸಿರಾಜ್ 5 ಹಾಗೂ ಪ್ರಸಿದ್ಧ್ ಕೃಷ್ಣ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.
ಸೌತ್ ಆಫ್ರಿಕಾ ಪರ ಕಗಿಸೊ ರಬಾಡಾ 5 ವಿಕೆಟ್ ಪಡೆದು ಮಿಂಚಿದರೆ, ನಾಂದ್ರೆ ಬರ್ಗರ್ 3, ಗೆರಾಲ್ಡ್ ಕೊಯೆಟ್ಜಿ ಹಾಗೂ ಮಾರ್ಕೊ ಯಾನ್ಸೆನ್ ತಲಾ ಒಂದೊಂದು ವಿಕೆಟ್ ಪಡೆದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…