ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್ ತಂಡ ಸದ್ಯ ಮೊದಲ ಟೆಸ್ಟ್ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ಇಂದಿನಿಂದ ( ಡಿಸೆಂಬರ್ 26 ) ಸೆಂಚುರಿಯನ್ನ ಸೂಪರ್ ಸ್ಪೋರ್ಟ್ ಪಾರ್ಕ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭಗೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್ ಮಾಡಿದೆ.
ದಿನದಾಟ ಸಂಪೂರ್ಣವಾಗಿ ಮುಗಿಯುವ ಮುನ್ನವೇ ಮಳೆ ಬಂದ ಕಾರಣ 59 ಓವರ್ಗಳು ಮಾತ್ರ ನಡೆದಿದ್ದು ಟೀಮ್ ಇಂಡಿಯಾ 8 ವಿಕೆಟ್ ನಷ್ಟಕ್ಕೆ 208 ರನ್ ಕಲೆಹಾಕಿದೆ.
ಭಾರತದ ಮೊದಲ ಇನ್ನಿಂಗ್ಸ್ನಲ್ಲಿ ಎಲ್ಲಾ ಬ್ಯಾಟ್ಸ್ಮನ್ಗಳೂ ಕೈಕೊಟ್ಟಿದ್ದು ಕೆಎಲ್ ರಾಹುಲ್ ತಂಡಕ್ಕೆ ಆಪದ್ಬಾಂಧವನಾಗಿ ನಿಂತಿದ್ದಾರೆ. 105 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 70 ರನ್ ಬಾರಿಸಿದ್ದು ಮೊದಲ ದಿನದಾಟದಂತ್ಯಕ್ಕೆ ಅಜೇಯರಾಗಿ ಉಳಿದಿದ್ದಾರೆ ಹಾಗೂ 10 ಎಸೆತಗಳನ್ನು ಆಡಿ ಯಾವುದೇ ರನ್ ಗಳಿಸದಿರುವ ಮೊಹಮ್ಮದ್ ಸಿರಾಜ್ ಸಹ ಅಜೇಯರಾಗಿ ಉಳಿದುಕೊಂಡಿದ್ದಾರೆ.
ಭಾರತದ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿದರು. ಜೈಸ್ವಾಲ್ 17 ರನ್ ಗಳಿಸಿದರೆ, ನಾಯಕ ರೋಹಿತ್ ಶರ್ಮಾ ಕೇವಲ 5 ರನ್ಗಳಿಗೆ ಔಟ್ ಆದರು. ಇನ್ನುಳಿದಂತೆ ಶುಭ್ಮನ್ ಗಿಲ್ 2, ವಿರಾಟ್ ಕೊಹ್ಲಿ 38, ಶ್ರೇಯಸ್ ಅಯ್ಯರ್ 31, ರವಿಚಂದ್ರನ್ ಅಶ್ವಿನ್ 8, ಶಾರ್ದೂಲ್ ಠಾಕೂರ್ 24 ಹಾಗೂ ಜಸ್ಪ್ರೀತ್ ಬುಮ್ರಾ ಕೇವಲ 1 ರನ್ ಕಲೆಹಾಕಿದರು.
ಸೌತ್ ಆಫ್ರಿಕಾ ಪರ ಕಗಿಸೊ ರಬಾಡಾ 5 ವಿಕೆಟ್ ಪಡೆದು ಮಿಂಚಿದರೆ, ನಾಂದ್ರೆ ಬರ್ಗರ್ ಹಾಗೂ ಮಾರ್ಕೊ ಯಾನ್ಸೆನ್ ಒಂದು ವಿಕೆಟ್ ಪಡೆದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…