ಕ್ರೀಡೆ

IND vs SA 1st Test: ಮೊದಲ ದಿನ ಮಳೆ ಅಡ್ಡಿ, ಎಡವಿದ ಭಾರತಕ್ಕೆ ರಾಹುಲ್‌ ಆಸರೆ

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್‌ ತಂಡ ಸದ್ಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ಇಂದಿನಿಂದ ( ಡಿಸೆಂಬರ್‌ 26 ) ಸೆಂಚುರಿಯನ್‌ನ ಸೂಪರ್‌ ಸ್ಪೋರ್ಟ್‌ ಪಾರ್ಕ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯ ಆರಂಭಗೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್‌ ಮಾಡಿದೆ.

ದಿನದಾಟ ಸಂಪೂರ್ಣವಾಗಿ ಮುಗಿಯುವ ಮುನ್ನವೇ ಮಳೆ ಬಂದ ಕಾರಣ 59 ಓವರ್‌ಗಳು ಮಾತ್ರ ನಡೆದಿದ್ದು ಟೀಮ್‌ ಇಂಡಿಯಾ 8 ವಿಕೆಟ್‌ ನಷ್ಟಕ್ಕೆ 208 ರನ್‌ ಕಲೆಹಾಕಿದೆ.

ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ಎಲ್ಲಾ ಬ್ಯಾಟ್ಸ್‌ಮನ್‌ಗಳೂ ಕೈಕೊಟ್ಟಿದ್ದು ಕೆಎಲ್‌ ರಾಹುಲ್‌ ತಂಡಕ್ಕೆ ಆಪದ್ಬಾಂಧವನಾಗಿ ನಿಂತಿದ್ದಾರೆ. 105 ಎಸೆತಗಳನ್ನು ಎದುರಿಸಿದ ಕೆಎಲ್‌ ರಾಹುಲ್‌ 70 ರನ್‌ ಬಾರಿಸಿದ್ದು ಮೊದಲ ದಿನದಾಟದಂತ್ಯಕ್ಕೆ ಅಜೇಯರಾಗಿ ಉಳಿದಿದ್ದಾರೆ ಹಾಗೂ 10 ಎಸೆತಗಳನ್ನು ಆಡಿ ಯಾವುದೇ ರನ್‌ ಗಳಿಸದಿರುವ ಮೊಹಮ್ಮದ್‌ ಸಿರಾಜ್‌ ಸಹ ಅಜೇಯರಾಗಿ ಉಳಿದುಕೊಂಡಿದ್ದಾರೆ.

ಭಾರತದ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್‌ ಹಾಗೂ ರೋಹಿತ್‌ ಶರ್ಮಾ ಕಣಕ್ಕಿಳಿದರು. ಜೈಸ್ವಾಲ್‌ 17 ರನ್‌ ಗಳಿಸಿದರೆ, ನಾಯಕ ರೋಹಿತ್‌ ಶರ್ಮಾ ಕೇವಲ 5 ರನ್‌ಗಳಿಗೆ ಔಟ್‌ ಆದರು. ಇನ್ನುಳಿದಂತೆ ಶುಭ್‌ಮನ್‌ ಗಿಲ್‌ 2, ವಿರಾಟ್‌ ಕೊಹ್ಲಿ 38, ಶ್ರೇಯಸ್‌ ಅಯ್ಯರ್‌ 31, ರವಿಚಂದ್ರನ್‌ ಅಶ್ವಿನ್‌ 8, ಶಾರ್ದೂಲ್‌ ಠಾಕೂರ್‌ 24 ಹಾಗೂ ಜಸ್‌ಪ್ರೀತ್‌ ಬುಮ್ರಾ ಕೇವಲ 1 ರನ್‌ ಕಲೆಹಾಕಿದರು.

ಸೌತ್‌ ಆಫ್ರಿಕಾ ಪರ ಕಗಿಸೊ ರಬಾಡಾ 5 ವಿಕೆಟ್‌ ಪಡೆದು ಮಿಂಚಿದರೆ, ನಾಂದ್ರೆ ಬರ್ಗರ್‌ ಹಾಗೂ ಮಾರ್ಕೊ ಯಾನ್‌ಸೆನ್‌ ಒಂದು ವಿಕೆಟ್‌ ಪಡೆದರು.

andolana

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

28 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

32 mins ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

37 mins ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

43 mins ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago