ಕ್ರೀಡೆ

IND vs SA 1st Test: ಮೊದಲ ದಿನ ಮಳೆ ಅಡ್ಡಿ, ಎಡವಿದ ಭಾರತಕ್ಕೆ ರಾಹುಲ್‌ ಆಸರೆ

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್‌ ತಂಡ ಸದ್ಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ಇಂದಿನಿಂದ ( ಡಿಸೆಂಬರ್‌ 26 ) ಸೆಂಚುರಿಯನ್‌ನ ಸೂಪರ್‌ ಸ್ಪೋರ್ಟ್‌ ಪಾರ್ಕ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯ ಆರಂಭಗೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್‌ ಮಾಡಿದೆ.

ದಿನದಾಟ ಸಂಪೂರ್ಣವಾಗಿ ಮುಗಿಯುವ ಮುನ್ನವೇ ಮಳೆ ಬಂದ ಕಾರಣ 59 ಓವರ್‌ಗಳು ಮಾತ್ರ ನಡೆದಿದ್ದು ಟೀಮ್‌ ಇಂಡಿಯಾ 8 ವಿಕೆಟ್‌ ನಷ್ಟಕ್ಕೆ 208 ರನ್‌ ಕಲೆಹಾಕಿದೆ.

ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ಎಲ್ಲಾ ಬ್ಯಾಟ್ಸ್‌ಮನ್‌ಗಳೂ ಕೈಕೊಟ್ಟಿದ್ದು ಕೆಎಲ್‌ ರಾಹುಲ್‌ ತಂಡಕ್ಕೆ ಆಪದ್ಬಾಂಧವನಾಗಿ ನಿಂತಿದ್ದಾರೆ. 105 ಎಸೆತಗಳನ್ನು ಎದುರಿಸಿದ ಕೆಎಲ್‌ ರಾಹುಲ್‌ 70 ರನ್‌ ಬಾರಿಸಿದ್ದು ಮೊದಲ ದಿನದಾಟದಂತ್ಯಕ್ಕೆ ಅಜೇಯರಾಗಿ ಉಳಿದಿದ್ದಾರೆ ಹಾಗೂ 10 ಎಸೆತಗಳನ್ನು ಆಡಿ ಯಾವುದೇ ರನ್‌ ಗಳಿಸದಿರುವ ಮೊಹಮ್ಮದ್‌ ಸಿರಾಜ್‌ ಸಹ ಅಜೇಯರಾಗಿ ಉಳಿದುಕೊಂಡಿದ್ದಾರೆ.

ಭಾರತದ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್‌ ಹಾಗೂ ರೋಹಿತ್‌ ಶರ್ಮಾ ಕಣಕ್ಕಿಳಿದರು. ಜೈಸ್ವಾಲ್‌ 17 ರನ್‌ ಗಳಿಸಿದರೆ, ನಾಯಕ ರೋಹಿತ್‌ ಶರ್ಮಾ ಕೇವಲ 5 ರನ್‌ಗಳಿಗೆ ಔಟ್‌ ಆದರು. ಇನ್ನುಳಿದಂತೆ ಶುಭ್‌ಮನ್‌ ಗಿಲ್‌ 2, ವಿರಾಟ್‌ ಕೊಹ್ಲಿ 38, ಶ್ರೇಯಸ್‌ ಅಯ್ಯರ್‌ 31, ರವಿಚಂದ್ರನ್‌ ಅಶ್ವಿನ್‌ 8, ಶಾರ್ದೂಲ್‌ ಠಾಕೂರ್‌ 24 ಹಾಗೂ ಜಸ್‌ಪ್ರೀತ್‌ ಬುಮ್ರಾ ಕೇವಲ 1 ರನ್‌ ಕಲೆಹಾಕಿದರು.

ಸೌತ್‌ ಆಫ್ರಿಕಾ ಪರ ಕಗಿಸೊ ರಬಾಡಾ 5 ವಿಕೆಟ್‌ ಪಡೆದು ಮಿಂಚಿದರೆ, ನಾಂದ್ರೆ ಬರ್ಗರ್‌ ಹಾಗೂ ಮಾರ್ಕೊ ಯಾನ್‌ಸೆನ್‌ ಒಂದು ವಿಕೆಟ್‌ ಪಡೆದರು.

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

44 mins ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

17 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

18 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

19 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

1 day ago