ಕ್ರೀಡೆ

IND vs SA 1st Test: ಮೊದಲ ದಿನ ಮಳೆ ಅಡ್ಡಿ, ಎಡವಿದ ಭಾರತಕ್ಕೆ ರಾಹುಲ್‌ ಆಸರೆ

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್‌ ತಂಡ ಸದ್ಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ಇಂದಿನಿಂದ ( ಡಿಸೆಂಬರ್‌ 26 ) ಸೆಂಚುರಿಯನ್‌ನ ಸೂಪರ್‌ ಸ್ಪೋರ್ಟ್‌ ಪಾರ್ಕ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯ ಆರಂಭಗೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್‌ ಮಾಡಿದೆ.

ದಿನದಾಟ ಸಂಪೂರ್ಣವಾಗಿ ಮುಗಿಯುವ ಮುನ್ನವೇ ಮಳೆ ಬಂದ ಕಾರಣ 59 ಓವರ್‌ಗಳು ಮಾತ್ರ ನಡೆದಿದ್ದು ಟೀಮ್‌ ಇಂಡಿಯಾ 8 ವಿಕೆಟ್‌ ನಷ್ಟಕ್ಕೆ 208 ರನ್‌ ಕಲೆಹಾಕಿದೆ.

ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ಎಲ್ಲಾ ಬ್ಯಾಟ್ಸ್‌ಮನ್‌ಗಳೂ ಕೈಕೊಟ್ಟಿದ್ದು ಕೆಎಲ್‌ ರಾಹುಲ್‌ ತಂಡಕ್ಕೆ ಆಪದ್ಬಾಂಧವನಾಗಿ ನಿಂತಿದ್ದಾರೆ. 105 ಎಸೆತಗಳನ್ನು ಎದುರಿಸಿದ ಕೆಎಲ್‌ ರಾಹುಲ್‌ 70 ರನ್‌ ಬಾರಿಸಿದ್ದು ಮೊದಲ ದಿನದಾಟದಂತ್ಯಕ್ಕೆ ಅಜೇಯರಾಗಿ ಉಳಿದಿದ್ದಾರೆ ಹಾಗೂ 10 ಎಸೆತಗಳನ್ನು ಆಡಿ ಯಾವುದೇ ರನ್‌ ಗಳಿಸದಿರುವ ಮೊಹಮ್ಮದ್‌ ಸಿರಾಜ್‌ ಸಹ ಅಜೇಯರಾಗಿ ಉಳಿದುಕೊಂಡಿದ್ದಾರೆ.

ಭಾರತದ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್‌ ಹಾಗೂ ರೋಹಿತ್‌ ಶರ್ಮಾ ಕಣಕ್ಕಿಳಿದರು. ಜೈಸ್ವಾಲ್‌ 17 ರನ್‌ ಗಳಿಸಿದರೆ, ನಾಯಕ ರೋಹಿತ್‌ ಶರ್ಮಾ ಕೇವಲ 5 ರನ್‌ಗಳಿಗೆ ಔಟ್‌ ಆದರು. ಇನ್ನುಳಿದಂತೆ ಶುಭ್‌ಮನ್‌ ಗಿಲ್‌ 2, ವಿರಾಟ್‌ ಕೊಹ್ಲಿ 38, ಶ್ರೇಯಸ್‌ ಅಯ್ಯರ್‌ 31, ರವಿಚಂದ್ರನ್‌ ಅಶ್ವಿನ್‌ 8, ಶಾರ್ದೂಲ್‌ ಠಾಕೂರ್‌ 24 ಹಾಗೂ ಜಸ್‌ಪ್ರೀತ್‌ ಬುಮ್ರಾ ಕೇವಲ 1 ರನ್‌ ಕಲೆಹಾಕಿದರು.

ಸೌತ್‌ ಆಫ್ರಿಕಾ ಪರ ಕಗಿಸೊ ರಬಾಡಾ 5 ವಿಕೆಟ್‌ ಪಡೆದು ಮಿಂಚಿದರೆ, ನಾಂದ್ರೆ ಬರ್ಗರ್‌ ಹಾಗೂ ಮಾರ್ಕೊ ಯಾನ್‌ಸೆನ್‌ ಒಂದು ವಿಕೆಟ್‌ ಪಡೆದರು.

andolana

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

11 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

12 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

13 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

17 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

18 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

24 hours ago