ಕ್ರೀಡೆ

IND vs SA 1st Test: ಮೊದಲ ದಿನ ಮಳೆ ಅಡ್ಡಿ, ಎಡವಿದ ಭಾರತಕ್ಕೆ ರಾಹುಲ್‌ ಆಸರೆ

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್‌ ತಂಡ ಸದ್ಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ಇಂದಿನಿಂದ ( ಡಿಸೆಂಬರ್‌ 26 ) ಸೆಂಚುರಿಯನ್‌ನ ಸೂಪರ್‌ ಸ್ಪೋರ್ಟ್‌ ಪಾರ್ಕ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯ ಆರಂಭಗೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್‌ ಮಾಡಿದೆ.

ದಿನದಾಟ ಸಂಪೂರ್ಣವಾಗಿ ಮುಗಿಯುವ ಮುನ್ನವೇ ಮಳೆ ಬಂದ ಕಾರಣ 59 ಓವರ್‌ಗಳು ಮಾತ್ರ ನಡೆದಿದ್ದು ಟೀಮ್‌ ಇಂಡಿಯಾ 8 ವಿಕೆಟ್‌ ನಷ್ಟಕ್ಕೆ 208 ರನ್‌ ಕಲೆಹಾಕಿದೆ.

ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ಎಲ್ಲಾ ಬ್ಯಾಟ್ಸ್‌ಮನ್‌ಗಳೂ ಕೈಕೊಟ್ಟಿದ್ದು ಕೆಎಲ್‌ ರಾಹುಲ್‌ ತಂಡಕ್ಕೆ ಆಪದ್ಬಾಂಧವನಾಗಿ ನಿಂತಿದ್ದಾರೆ. 105 ಎಸೆತಗಳನ್ನು ಎದುರಿಸಿದ ಕೆಎಲ್‌ ರಾಹುಲ್‌ 70 ರನ್‌ ಬಾರಿಸಿದ್ದು ಮೊದಲ ದಿನದಾಟದಂತ್ಯಕ್ಕೆ ಅಜೇಯರಾಗಿ ಉಳಿದಿದ್ದಾರೆ ಹಾಗೂ 10 ಎಸೆತಗಳನ್ನು ಆಡಿ ಯಾವುದೇ ರನ್‌ ಗಳಿಸದಿರುವ ಮೊಹಮ್ಮದ್‌ ಸಿರಾಜ್‌ ಸಹ ಅಜೇಯರಾಗಿ ಉಳಿದುಕೊಂಡಿದ್ದಾರೆ.

ಭಾರತದ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್‌ ಹಾಗೂ ರೋಹಿತ್‌ ಶರ್ಮಾ ಕಣಕ್ಕಿಳಿದರು. ಜೈಸ್ವಾಲ್‌ 17 ರನ್‌ ಗಳಿಸಿದರೆ, ನಾಯಕ ರೋಹಿತ್‌ ಶರ್ಮಾ ಕೇವಲ 5 ರನ್‌ಗಳಿಗೆ ಔಟ್‌ ಆದರು. ಇನ್ನುಳಿದಂತೆ ಶುಭ್‌ಮನ್‌ ಗಿಲ್‌ 2, ವಿರಾಟ್‌ ಕೊಹ್ಲಿ 38, ಶ್ರೇಯಸ್‌ ಅಯ್ಯರ್‌ 31, ರವಿಚಂದ್ರನ್‌ ಅಶ್ವಿನ್‌ 8, ಶಾರ್ದೂಲ್‌ ಠಾಕೂರ್‌ 24 ಹಾಗೂ ಜಸ್‌ಪ್ರೀತ್‌ ಬುಮ್ರಾ ಕೇವಲ 1 ರನ್‌ ಕಲೆಹಾಕಿದರು.

ಸೌತ್‌ ಆಫ್ರಿಕಾ ಪರ ಕಗಿಸೊ ರಬಾಡಾ 5 ವಿಕೆಟ್‌ ಪಡೆದು ಮಿಂಚಿದರೆ, ನಾಂದ್ರೆ ಬರ್ಗರ್‌ ಹಾಗೂ ಮಾರ್ಕೊ ಯಾನ್‌ಸೆನ್‌ ಒಂದು ವಿಕೆಟ್‌ ಪಡೆದರು.

andolana

Recent Posts

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

3 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

4 hours ago

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…

4 hours ago

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

11 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

11 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

11 hours ago