ಕ್ರೀಡೆ

IND vs SA 1st Test: ಎರಡನೇ ದಿನದಾಟದಂತ್ಯಕ್ಕೆ ದಕ್ಷಿಣ ಆಫ್ರಿಕಾ ಮೇಲುಗೈ

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್‌ ತಂಡ ಸದ್ಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ನಿನ್ನೆಯಿಂದ ( ಡಿಸೆಂಬರ್‌ 26 ) ಸೆಂಚುರಿಯನ್‌ನ ಸೂಪರ್‌ ಸ್ಪೋರ್ಟ್‌ ಪಾರ್ಕ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯ ಆರಂಭಗೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್‌ ಮಾಡಿ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಬಳಿಕ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ಎರಡನೇ ದಿನದಾಟದಂತ್ಯಕ್ಕೆ 66 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 256 ರನ್‌ ಗಳಿಸುವ ಮೂಲಕ 11 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿದೆ.

ದಕ್ಷಿಣ ಆಫ್ರಿಕಾದ ಪರ ಡೀನ್‌ ಎಲ್ಗರ್‌ ಶತಕ ಬಾರಿಸಿ ( 140 ) ಅಜೇಯರಾಗಿ ಉಳಿದುಕೊಂಡಿದ್ದರೆ, ಡೇವಿಡ್‌ ಬೆಡಿಂಗ್‌ಹ್ಯಾಮ್‌ 56 ರನ್‌ ಗಳಿಸಿ ಜವಾಬ್ದಾರಿಯುತ ಆಟವನ್ನಾಡಿದ್ದಾರೆ. ಇನ್ನುಳಿದಂತೆ ಯಾವುದೇ ಬ್ಯಾಟ್ಸ್‌ಮನ್‌ ಸಹ ನಿರೀಕ್ಷಿಸಿದ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿಲ್ಲ. ಏಡನ್‌ ಮಾರ್ಕ್ರಮ್‌ 5 ರನ್‌, ಟೋನಿ ಡಿ ಝೋರ್ಝಿ 28, ಕೀಗನ್‌ ಪೀಟರ್ಸನ್‌ 2, ಕೈಲ್‌ ವೆರೆಯ್ನ್‌ 4 ಹಾಗೂ ಮಾರ್ಕೊ ಯಾನ್‌ಸೆನ್‌ ಅಜೇಯ 3 ರನ್‌ ಬಾರಿಸಿದರು.

ಭಾರತದ ಪರ ಮೊಹಮ್ಮದ್‌ ಸಿರಾಜ್‌ ಹಾಗೂ ಜಸ್‌ಪ್ರೀತ್‌ ಬುಮ್ರಾ ತಲಾ 2 ವಿಕೆಟ್‌ ಮತ್ತು ಪ್ರಸಿದ್ಧ್‌ ಕೃಷ್ಣ ಒಂದು ವಿಕೆಟ್‌ ಪಡೆದರು.

andolana

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

7 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

9 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

10 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

10 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

11 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

12 hours ago