ಕ್ರೀಡೆ

IND vs SA 2nd T20: ಪಂದ್ಯದ ಟಾಸ್‌ ವರದಿ, ಆಡುವ ಬಳಗದ ಮಾಹಿತಿ

ಟೀಮ್‌ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಿರತವಾಗಿದ್ದು, ಹರಿಣಗಳ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಸೆಣಸಾಡಲಿದೆ. ಮೊದಲಿಗೆ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ಡಿಸೆಂಬರ್‌ 10ರಂದು ನಡೆದ ಮೊದಲ ಪಂದ್ಯ ಮಳೆ ಕಾರಣದಿಂದಾಗಿ ಟಾಸ್‌ ಕೂಡ ಆಗದೇ ರದ್ದಾಗಿತ್ತು. ಇಂದು ( ಡಿಸೆಂಬರ್‌ 12 ) ಎರಡನೇ ಟಿ ಟ್ವೆಂಟಿ ಪಂದ್ಯ ಜಿಕೆಬರ್ಹಾದ ಸೇಂಟ್‌ ಜಾರ್ಜ್‌ ಪಾರ್ಕ್‌ನಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ದುಕೊಂಡಿದ್ದು, ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಸೂರ್ಯಕುಮಾರ್‌ ನೇತೃತ್ವದಲ್ಲಿ ಯುವ ಭಾರತ ತಂಡ ಕಣಕ್ಕಿಳಿದಿದ್ದು, ಅನಾರೋಗ್ಯದ ಸಮಸ್ಯೆಯಿಂದಾಗಿ ಈ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್‌ ಕಣಕ್ಕಿಳಿದಿಲ್ಲ. ಇಂದಿನ ಪಂದ್ಯದಲ್ಲಿ ಇತ್ತಂಡಗಳ ಪರ ಕಣಕ್ಕಿಳಿದಿರುವ ಆಟಗಾರರ ಪಟ್ಟಿ ಕೆಳಕಂಡಂತಿದೆ..

ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್‌ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್‌

ದಕ್ಷಿಣ ಆಫ್ರಿಕಾ ಆಡುವ ಬಳಗ: ಮ್ಯಾಥ್ಯೂ ಬ್ರೀಟ್ಜ್ಕಿ, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಯಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಲಿಜಾಡ್ ವಿಲಿಯಮ್ಸ್, ತಬ್ರೈಜ್ ಶಮ್ಸಿ

andolana

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago