ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ತಂಡ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಡುತ್ತಿದ್ದು, ಇಂದು ( ಡಿಸೆಂಬರ್ 21 ) ಪಾರ್ಲ್ನ ಬೋಲ್ಯಾಂಡ್ ಪಾರ್ಕ್ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಕಣಕ್ಕಿಳಿದಿದೆ. ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದ್ದು ಟೀಂ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಇನ್ನು ಮೊದಲ ಏಕದಿನ ಪಂದ್ಯವನ್ನು ಭಾರತ ತಂಡ ಗೆದ್ದಿದ್ದು, ಎರಡನೇ ಪಂದ್ಯವನ್ನು ದಕ್ಷಿಣ ಆಫ್ರಿಕಾ ಗೆದ್ದಿದೆ. ಈ ಕಾರಣ ಈ ಮೂರನೇ ಪಂದ್ಯ ಡಿಸೈಡರ್ ಪಂದ್ಯವಾಗಿದ್ದು, ಜಯ ಸಾಧಿಸಲಿರುವ ತಂಡ ಸರಣಿಯನ್ನು ಗೆಲ್ಲಲಿದೆ. ಭಾರತ ತಂಡದ ಆಟಗಾರ ರಜತ್ ಪಾಟಿದಾರ್ ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಮಾದರಿಗೆ ಪದಾರ್ಪಣೆ ಮಾಡಿದ್ದಾರೆ.
ಭಾರತ ಆಡುವ ಬಳಗ: ಸಂಜು ಸ್ಯಾಮ್ಸನ್, ಸಾಯಿ ಸುದರ್ಶನ್, ರಜತ್ ಪಾಟಿದಾರ್, ತಿಲಕ್ ವರ್ಮಾ, ಕಲ್ ರಾಹುಲ್ (ನಾಯಕ & ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರಶ್ದೀಪ್ ಸಿಂಗ್, ಆವೇಶ್ ಖಾನ್, ಮುಖೇಶ್ ಕುಮಾರ್
ದಕ್ಷಿಣ ಆಫ್ರಿಕಾ ಆಡುವ ಬಳಗ: ರೀಜಾ ಹೆಂಡ್ರಿಕ್ಸ್, ಟೋನಿ ಡಿ ಜೋರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ನಾಂಡ್ರೆ ಬರ್ಗರ್, ಲಿಜಾಡ್ ವಿಲಿಯಮ್ಸ್, ಬ್ಯೂರಾನ್ ಹೆಂಡ್ರಿಕ್ಸ್
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…