ಕ್ರೀಡೆ

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ 188 ರನ್​ಗಳ ಗುರಿ ಬೆನ್ನಟ್ಟಿದ ಭಾರತ ಯಾವುದೇ ಹಂತದಲ್ಲಿ ಪೈಪೋಟಿ ನೀಡದೇ ಸೋಲೊಪ್ಪಿಕೊಂಡಿದೆ.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ, ಮೊದಲ ಓವರ್​ನಿಂದಲೇ ಹರಿಣ ಪಡೆ ಭಾರತದ ಬ್ಯಾಟರ್​ಗಳ ಮೇಲೆ ಪ್ರಾಬಲ್ಯ ಸಾಧಿಸಿತು. ಟೀಮ್ ಇಂಡಿಯಾ 18.5 ಓವರ್​ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 111 ರನ್​ಗಳಿಸಲಷ್ಟೇ ಶಕ್ತವಾಯಿತು.

ಮೊದಲ ಓವರ್‌ನಲ್ಲೇ ಇಶಾನ್ ಕಿಶನ್ ಖಾತೆ ತೆರೆಯುವ ಮುನ್ನವೇ ನಾಯಕ ಏಯ್ಡನ್ ಮಾರ್ಕ್‌ರಮ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ತಿಲಕ್ ವರ್ಮಾ ಒಂದು ರನ್‌ಗೆ ಮಾರ್ಕೊ ಯಾನ್ಸನ್‌ಗೆ ವಿಕೆಟ್ ಒಪ್ಪಿಸಿದರೆ, ಮೊದಲ ಮೂರು ಪಂದ್ಯಗಳಲ್ಲಿ ಶೂನ್ಯ ಸುತ್ತಿದ್ದ ಅಭಿಷೇಕ್ ಶರ್ಮಾ 15 ರನ್‌ಗೆ ವಿಕೆಟ್ ಒಪ್ಪಿಸಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್(18), ವಾಷಿಂಗ್ಟನ್ ಸುಂದರ್(11), ಹಾರ್ದಿಕ್ ಪಾಂಡ್ಯ(18) ಹಾಗೂ ರಿಂಕು ಸಿಂಗ್(0) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲು ವಿಫಲವಾದರು. ಇನ್ನು ಶಿವಂ ದುಬೆ 37 ಎಸೆತಗಳಲ್ಲಿ 42 ರನ್ ಸಿಡಿಸಿದರಾದರೂ ಮತ್ತೊಂದು ತುದಿಯಲ್ಲಿ ಸೂಕ್ತ ಸಾಥ್ ಸಿಗಲಿಲ್ಲ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago