ಕ್ರೀಡೆ

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ 188 ರನ್​ಗಳ ಗುರಿ ಬೆನ್ನಟ್ಟಿದ ಭಾರತ ಯಾವುದೇ ಹಂತದಲ್ಲಿ ಪೈಪೋಟಿ ನೀಡದೇ ಸೋಲೊಪ್ಪಿಕೊಂಡಿದೆ.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ, ಮೊದಲ ಓವರ್​ನಿಂದಲೇ ಹರಿಣ ಪಡೆ ಭಾರತದ ಬ್ಯಾಟರ್​ಗಳ ಮೇಲೆ ಪ್ರಾಬಲ್ಯ ಸಾಧಿಸಿತು. ಟೀಮ್ ಇಂಡಿಯಾ 18.5 ಓವರ್​ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 111 ರನ್​ಗಳಿಸಲಷ್ಟೇ ಶಕ್ತವಾಯಿತು.

ಮೊದಲ ಓವರ್‌ನಲ್ಲೇ ಇಶಾನ್ ಕಿಶನ್ ಖಾತೆ ತೆರೆಯುವ ಮುನ್ನವೇ ನಾಯಕ ಏಯ್ಡನ್ ಮಾರ್ಕ್‌ರಮ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ತಿಲಕ್ ವರ್ಮಾ ಒಂದು ರನ್‌ಗೆ ಮಾರ್ಕೊ ಯಾನ್ಸನ್‌ಗೆ ವಿಕೆಟ್ ಒಪ್ಪಿಸಿದರೆ, ಮೊದಲ ಮೂರು ಪಂದ್ಯಗಳಲ್ಲಿ ಶೂನ್ಯ ಸುತ್ತಿದ್ದ ಅಭಿಷೇಕ್ ಶರ್ಮಾ 15 ರನ್‌ಗೆ ವಿಕೆಟ್ ಒಪ್ಪಿಸಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್(18), ವಾಷಿಂಗ್ಟನ್ ಸುಂದರ್(11), ಹಾರ್ದಿಕ್ ಪಾಂಡ್ಯ(18) ಹಾಗೂ ರಿಂಕು ಸಿಂಗ್(0) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲು ವಿಫಲವಾದರು. ಇನ್ನು ಶಿವಂ ದುಬೆ 37 ಎಸೆತಗಳಲ್ಲಿ 42 ರನ್ ಸಿಡಿಸಿದರಾದರೂ ಮತ್ತೊಂದು ತುದಿಯಲ್ಲಿ ಸೂಕ್ತ ಸಾಥ್ ಸಿಗಲಿಲ್ಲ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

47 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

53 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

57 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago