ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ 188 ರನ್ಗಳ ಗುರಿ ಬೆನ್ನಟ್ಟಿದ ಭಾರತ ಯಾವುದೇ ಹಂತದಲ್ಲಿ ಪೈಪೋಟಿ ನೀಡದೇ ಸೋಲೊಪ್ಪಿಕೊಂಡಿದೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ, ಮೊದಲ ಓವರ್ನಿಂದಲೇ ಹರಿಣ ಪಡೆ ಭಾರತದ ಬ್ಯಾಟರ್ಗಳ ಮೇಲೆ ಪ್ರಾಬಲ್ಯ ಸಾಧಿಸಿತು. ಟೀಮ್ ಇಂಡಿಯಾ 18.5 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 111 ರನ್ಗಳಿಸಲಷ್ಟೇ ಶಕ್ತವಾಯಿತು.
ಮೊದಲ ಓವರ್ನಲ್ಲೇ ಇಶಾನ್ ಕಿಶನ್ ಖಾತೆ ತೆರೆಯುವ ಮುನ್ನವೇ ನಾಯಕ ಏಯ್ಡನ್ ಮಾರ್ಕ್ರಮ್ಗೆ ವಿಕೆಟ್ ಒಪ್ಪಿಸಿದರು. ಇನ್ನು ತಿಲಕ್ ವರ್ಮಾ ಒಂದು ರನ್ಗೆ ಮಾರ್ಕೊ ಯಾನ್ಸನ್ಗೆ ವಿಕೆಟ್ ಒಪ್ಪಿಸಿದರೆ, ಮೊದಲ ಮೂರು ಪಂದ್ಯಗಳಲ್ಲಿ ಶೂನ್ಯ ಸುತ್ತಿದ್ದ ಅಭಿಷೇಕ್ ಶರ್ಮಾ 15 ರನ್ಗೆ ವಿಕೆಟ್ ಒಪ್ಪಿಸಿದರು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್(18), ವಾಷಿಂಗ್ಟನ್ ಸುಂದರ್(11), ಹಾರ್ದಿಕ್ ಪಾಂಡ್ಯ(18) ಹಾಗೂ ರಿಂಕು ಸಿಂಗ್(0) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲು ವಿಫಲವಾದರು. ಇನ್ನು ಶಿವಂ ದುಬೆ 37 ಎಸೆತಗಳಲ್ಲಿ 42 ರನ್ ಸಿಡಿಸಿದರಾದರೂ ಮತ್ತೊಂದು ತುದಿಯಲ್ಲಿ ಸೂಕ್ತ ಸಾಥ್ ಸಿಗಲಿಲ್ಲ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…