ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ 188 ರನ್ಗಳ ಗುರಿ ಬೆನ್ನಟ್ಟಿದ ಭಾರತ ಯಾವುದೇ ಹಂತದಲ್ಲಿ ಪೈಪೋಟಿ ನೀಡದೇ ಸೋಲೊಪ್ಪಿಕೊಂಡಿದೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ, ಮೊದಲ ಓವರ್ನಿಂದಲೇ ಹರಿಣ ಪಡೆ ಭಾರತದ ಬ್ಯಾಟರ್ಗಳ ಮೇಲೆ ಪ್ರಾಬಲ್ಯ ಸಾಧಿಸಿತು. ಟೀಮ್ ಇಂಡಿಯಾ 18.5 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 111 ರನ್ಗಳಿಸಲಷ್ಟೇ ಶಕ್ತವಾಯಿತು.
ಮೊದಲ ಓವರ್ನಲ್ಲೇ ಇಶಾನ್ ಕಿಶನ್ ಖಾತೆ ತೆರೆಯುವ ಮುನ್ನವೇ ನಾಯಕ ಏಯ್ಡನ್ ಮಾರ್ಕ್ರಮ್ಗೆ ವಿಕೆಟ್ ಒಪ್ಪಿಸಿದರು. ಇನ್ನು ತಿಲಕ್ ವರ್ಮಾ ಒಂದು ರನ್ಗೆ ಮಾರ್ಕೊ ಯಾನ್ಸನ್ಗೆ ವಿಕೆಟ್ ಒಪ್ಪಿಸಿದರೆ, ಮೊದಲ ಮೂರು ಪಂದ್ಯಗಳಲ್ಲಿ ಶೂನ್ಯ ಸುತ್ತಿದ್ದ ಅಭಿಷೇಕ್ ಶರ್ಮಾ 15 ರನ್ಗೆ ವಿಕೆಟ್ ಒಪ್ಪಿಸಿದರು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್(18), ವಾಷಿಂಗ್ಟನ್ ಸುಂದರ್(11), ಹಾರ್ದಿಕ್ ಪಾಂಡ್ಯ(18) ಹಾಗೂ ರಿಂಕು ಸಿಂಗ್(0) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲು ವಿಫಲವಾದರು. ಇನ್ನು ಶಿವಂ ದುಬೆ 37 ಎಸೆತಗಳಲ್ಲಿ 42 ರನ್ ಸಿಡಿಸಿದರಾದರೂ ಮತ್ತೊಂದು ತುದಿಯಲ್ಲಿ ಸೂಕ್ತ ಸಾಥ್ ಸಿಗಲಿಲ್ಲ.
ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…
ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…
ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…
ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…
ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಎಂ…