ಕ್ರೀಡೆ

IND vs SRI t20 ಸರಣಿ: ಗಂಭೀರ್‌, ಸೂರ್ಯಕುಮಾರ್‌ಗೆ ಮೊದಲ ಪರೀಕ್ಷೆ

ಕೊಲೊಂಬೊ: ಇಂದಿನಿಂದ ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲ ಟಿ-20 ಕ್ರಿಕೆಟ್ ಪಂದ್ಯ ಆರಂಭವಾಗಲಿದ್ದು, ಮುಖ್ಯ ಕೋಚ್‌ ಆಗಿ ನೇಮಕಗೊಂಡಿರುವ ಗೌತಮ್‌ ಗಂಭೀರ್‌ ಹಾಗೂ ನಾಯಕ ಸೂರ್ಯಕುಮಾರ್‌ ಯಾದವ್‌ ಅವರಿಗೆ ಅಗ್ನಿ ಪರೀಕ್ಷೆ ಎದುರಾಗಿದೆ.

ರೋಹಿತ್ ಶರ್ಮಾ ಟಿ-20 ನಾಯಕತ್ವದಿಂದ ಕೆಳಗಿಳಿದ ಬಳಿಕ ಅಚ್ಚರಿಯೆಂಬಂತೆ ಸೂರ್ಯ ಕುಮಾರ್ ಯಾದವ್ ಅವರನ್ನು ನಾಯಕರನ್ನಾಗಿ ಮಾಡಿ ಬಿಸಿಸಿಐ ನೇಮಕಮಾಡಿತು. ಇದರೊಂದಿಗೆ ಶ್ರೀಲಂಕಾ ವಿರುದ್ಧ ಕಾದಾಟಕ್ಕೆ ತಂಡ ಸಿದ್ದವಾಗಿದ್ದು, ಸೂರ್ಯಕುಮಾರ್‌ ನೇತೃತ್ವದಲ್ಲಿ ಟೀಂ ಇಂಡಿಯಾ ಹೇಗೆ ಮುನ್ನಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಜತೆಗೆ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಸ್ಥಾನಕ್ಕೆ ಯಾರನ್ನು ಕಣಕ್ಕಿಳಿಸಲಾಗುವುದು ಎಂಬುದನ್ನು ಕಾದುನೋಡಬೇಕಿದೆ. ವಿರಾಟ್‌ ಬದಲಿ ಸ್ಥಾನಕ್ಕೆ ರಿಷಭ್‌ ಪಂತ್‌ ಇಲ್ಲವಾದಲ್ಲಿ ಕೆ.ಎಲ್‌ ರಾಹುಲ್‌ರನ್ನು ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ಟಿ-20 ಸರಣಿಗೆ ಭಾರತ ತಂಡ: ಸೂರ್ಯಕುಮಾ‌ ಯಾದವ್ (ನಾಯಕ), ಶುಭಾಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ಸಂಜು ಸ್ಯಾಮನ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್‌ಟನ್ ಸುಂದರ್, ರವಿ ಬಿಪ್ಲೋಮ್, ಅರ್ಶ್ವದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್. ಟಿ-20 ಸರಣಿ

ವೇಳಾಪಟ್ಟಿ

ಮೊದಲ ಟಿ20 ಜು.27 ರಂದು ಸಂಜೆ 7ಕ್ಕೆ
2ನೇ ಟಿ20 ಜು.28ರಂದು ಸಂಜೆ 7ಕೆ
3ನೇ ಟಿ20 ಜು.30 ರಂದು ಸಂಜೆ 7ಕ್ಕೆ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

2 hours ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

4 hours ago

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

15 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

18 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

18 hours ago