ಸಿಡ್ನಿ: ಮುಂಬರುವ ಜೂನ್ 7ರಂದು ಇಂಗ್ಲೆಂಡಿನ ಓವಲ್ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಆಸ್ಟ್ರೇಲಿಯಾದ ತಂಡವನ್ನು ಪ್ರಕಟಿಸಲಾಗಿದೆ.
ಡೇವಿಡ್ ವಾರ್ನರ್ ಸೇರಿದಂತೆ 17 ಜನರ ತಂಡವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿದೆ. ಮೇ 28ರಂದು 15 ಜನರ ತಂಡವನ್ನು ಅಂತಿಮವಾಗಿ ಪ್ರಕಟಿಸಲಾಗುವುದು ಎಂದು ಆಯ್ಕೆ ಸಮಿತಿ ತಿಳಿಸಿದೆ.
ಕಳೆದ ಫೆಬ್ರುವರಿ ತಿಂಗಳಲ್ಲಿ ಭಾರತದ ವಿರುದ್ಧ ನಡೆದ ಆ್ಯಶಸ್ ಟೆಸ್ಟ್ ಸರಣಿಯ ತಂಡವನ್ನೇ ಬಹುತೇಕ ಉಳಿಸಿಕೊಳ್ಳಲಾಗಿದೆ.
ತಂಡ ಇಂತಿದೆ: ಪ್ಯಾಟ್ ಕಮನ್ಸ್ (ನಾಯಕ), ನಥನ್ ಲಯನ್, ಟಾಡ್ ಮುರ್ಫಿ, ಸ್ಕಾಟ್ ಬೋಲಾಂಡ್, ಉಸ್ಮಾನ್ ಖ್ವಾಜಾ, ಕ್ಯಾಮರೂನ್ ಗ್ರೀನ್, ಟ್ರಾವಿಸ್ ಹೆಡ್, ಮಾರ್ನಸ್ ಲಾಬುಷೇನ್, ಸ್ಟೀವ್ ಸ್ಮಿತ್ (ಉಪ ನಾಯಕ), ಡೇವಿಡ್ ವಾರ್ನರ್, ಅಲೆಕ್ಸ್ ಕೇರಿ (ವಿಕೆಟ್ ಕೀಪರ್), ಮರ್ಕಸ್ ಹ್ಯಾರಿಸ್, ಹ್ಯಾಜಲ್ವುಡ್, ಜೋಶ್ ಇಂಕ್ಲಿಶ್, ಮಿಷೆಲ್ ಮಾರ್ಶ್, ಮಿಷೆಲ್ ಸ್ಟಾರ್ಕ್ ಹಾಗೂ ಮ್ಯಾಥಿವ್
ಈ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾದ ಸವಾಲನ್ನು ಎದುರಿಸಲಿದೆ. ಈ ಪಂದ್ಯ ಜೂನ್ 7 ರಿಂದ 11ರ ವರೆಗೆ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ.
2021ರಲ್ಲಿ ನಡೆದ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲನುಭವಿಸಿದ್ದ ಭಾರತ ರನ್ನರ್-ಅಪ್ ಪ್ರಶಸ್ತಿಗೆ ಭಾಜನವಾಗಿತ್ತು.
ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.…
ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್ಮಹಲ್ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…