ಕ್ರೀಡೆ

ಭಾರತ ವಿರುದ್ಧ ಟೆಸ್ಟ್‌ ಚಾಂ‍ಪಿಯನ್‌ಶಿಪ್‌ ಫೈನಲ್‌: ಆಸ್ಟ್ರೇಲಿಯಾ ತಂಡ ಪ್ರಕಟ

ಸಿಡ್ನಿ: ಮುಂಬರುವ ಜೂನ್‌ 7ರಂದು ಇಂಗ್ಲೆಂಡಿನ ಓವಲ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್‌ ಚಾಂ‍ಪಿಯನ್‌ಶಿಪ್‌ ಫೈನಲ್‌ ಪಂದ್ಯಕ್ಕೆ ಆಸ್ಟ್ರೇಲಿಯಾದ ತಂಡವನ್ನು ಪ್ರಕಟಿಸಲಾಗಿದೆ.

ಡೇವಿಡ್‌ ವಾರ್ನರ್‌ ಸೇರಿದಂತೆ 17 ಜನರ ತಂಡವನ್ನು ಕ್ರಿಕೆಟ್‌ ಆಸ್ಟ್ರೇಲಿಯಾ ಪ್ರಕಟಿಸಿದೆ. ಮೇ 28ರಂದು 15 ಜನರ ತಂಡವನ್ನು ಅಂತಿಮವಾಗಿ ಪ್ರಕಟಿಸಲಾಗುವುದು ಎಂದು ಆಯ್ಕೆ ಸಮಿತಿ ತಿಳಿಸಿದೆ.

ಕಳೆದ ಫೆಬ್ರುವರಿ ತಿಂಗಳಲ್ಲಿ ಭಾರತದ ವಿರುದ್ಧ ನಡೆದ ಆ್ಯಶಸ್‌ ಟೆಸ್ಟ್‌ ಸರಣಿಯ ತಂಡವನ್ನೇ ಬಹುತೇಕ ಉಳಿಸಿಕೊಳ್ಳಲಾಗಿದೆ.

ತಂಡ ಇಂತಿದೆ: ಪ್ಯಾಟ್ ಕಮನ್ಸ್ (ನಾಯಕ), ನಥನ್ ಲಯನ್, ಟಾಡ್ ಮುರ್ಫಿ, ಸ್ಕಾಟ್ ಬೋಲಾಂಡ್, ಉಸ್ಮಾನ್ ಖ್ವಾಜಾ, ಕ್ಯಾಮರೂನ್ ಗ್ರೀನ್, ಟ್ರಾವಿಸ್‌ ಹೆಡ್‌, ಮಾರ್ನಸ್‌ ಲಾಬುಷೇನ್‌, ಸ್ಟೀವ್‌ ಸ್ಮಿತ್‌ (ಉಪ ನಾಯಕ), ಡೇವಿಡ್ ವಾರ್ನರ್, ಅಲೆಕ್ಸ್ ಕೇರಿ (ವಿಕೆಟ್ ಕೀಪರ್), ಮರ್ಕಸ್ ಹ್ಯಾರಿಸ್, ಹ್ಯಾಜಲ್‌ವುಡ್‌, ಜೋಶ್‌ ಇಂಕ್ಲಿಶ್‌, ಮಿಷೆಲ್‌ ಮಾರ್ಶ್‌, ಮಿಷೆಲ್‌ ಸ್ಟಾರ್ಕ್‌ ಹಾಗೂ ಮ್ಯಾಥಿವ್‌

ಈ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾದ ಸವಾಲನ್ನು ಎದುರಿಸಲಿದೆ. ಈ ಪಂದ್ಯ ಜೂನ್‌ 7 ರಿಂದ 11ರ ವರೆಗೆ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿ ಫೈನಲ್‌ ಪ್ರವೇಶಿಸಿದ ಸಾಧನೆ ಮಾಡಿದೆ.

2021ರಲ್ಲಿ ನಡೆದ ಚೊಚ್ಚಲ ವಿಶ್ವ ಟೆಸ್ಟ್‌ ಚಾಂ‍ಪಿಯನ್‌ಶಿಪ್‌ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಸೋಲನುಭವಿಸಿದ್ದ ಭಾರತ ರನ್ನರ್-ಅಪ್ ಪ್ರಶಸ್ತಿಗೆ ಭಾಜನವಾಗಿತ್ತು.

andolanait

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

4 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

8 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

8 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

8 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

8 hours ago