ಕ್ರೀಡೆ

ಭಾರತ ವಿರುದ್ಧ ಟೆಸ್ಟ್‌ ಚಾಂ‍ಪಿಯನ್‌ಶಿಪ್‌ ಫೈನಲ್‌: ಆಸ್ಟ್ರೇಲಿಯಾ ತಂಡ ಪ್ರಕಟ

ಸಿಡ್ನಿ: ಮುಂಬರುವ ಜೂನ್‌ 7ರಂದು ಇಂಗ್ಲೆಂಡಿನ ಓವಲ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್‌ ಚಾಂ‍ಪಿಯನ್‌ಶಿಪ್‌ ಫೈನಲ್‌ ಪಂದ್ಯಕ್ಕೆ ಆಸ್ಟ್ರೇಲಿಯಾದ ತಂಡವನ್ನು ಪ್ರಕಟಿಸಲಾಗಿದೆ.

ಡೇವಿಡ್‌ ವಾರ್ನರ್‌ ಸೇರಿದಂತೆ 17 ಜನರ ತಂಡವನ್ನು ಕ್ರಿಕೆಟ್‌ ಆಸ್ಟ್ರೇಲಿಯಾ ಪ್ರಕಟಿಸಿದೆ. ಮೇ 28ರಂದು 15 ಜನರ ತಂಡವನ್ನು ಅಂತಿಮವಾಗಿ ಪ್ರಕಟಿಸಲಾಗುವುದು ಎಂದು ಆಯ್ಕೆ ಸಮಿತಿ ತಿಳಿಸಿದೆ.

ಕಳೆದ ಫೆಬ್ರುವರಿ ತಿಂಗಳಲ್ಲಿ ಭಾರತದ ವಿರುದ್ಧ ನಡೆದ ಆ್ಯಶಸ್‌ ಟೆಸ್ಟ್‌ ಸರಣಿಯ ತಂಡವನ್ನೇ ಬಹುತೇಕ ಉಳಿಸಿಕೊಳ್ಳಲಾಗಿದೆ.

ತಂಡ ಇಂತಿದೆ: ಪ್ಯಾಟ್ ಕಮನ್ಸ್ (ನಾಯಕ), ನಥನ್ ಲಯನ್, ಟಾಡ್ ಮುರ್ಫಿ, ಸ್ಕಾಟ್ ಬೋಲಾಂಡ್, ಉಸ್ಮಾನ್ ಖ್ವಾಜಾ, ಕ್ಯಾಮರೂನ್ ಗ್ರೀನ್, ಟ್ರಾವಿಸ್‌ ಹೆಡ್‌, ಮಾರ್ನಸ್‌ ಲಾಬುಷೇನ್‌, ಸ್ಟೀವ್‌ ಸ್ಮಿತ್‌ (ಉಪ ನಾಯಕ), ಡೇವಿಡ್ ವಾರ್ನರ್, ಅಲೆಕ್ಸ್ ಕೇರಿ (ವಿಕೆಟ್ ಕೀಪರ್), ಮರ್ಕಸ್ ಹ್ಯಾರಿಸ್, ಹ್ಯಾಜಲ್‌ವುಡ್‌, ಜೋಶ್‌ ಇಂಕ್ಲಿಶ್‌, ಮಿಷೆಲ್‌ ಮಾರ್ಶ್‌, ಮಿಷೆಲ್‌ ಸ್ಟಾರ್ಕ್‌ ಹಾಗೂ ಮ್ಯಾಥಿವ್‌

ಈ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾದ ಸವಾಲನ್ನು ಎದುರಿಸಲಿದೆ. ಈ ಪಂದ್ಯ ಜೂನ್‌ 7 ರಿಂದ 11ರ ವರೆಗೆ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿ ಫೈನಲ್‌ ಪ್ರವೇಶಿಸಿದ ಸಾಧನೆ ಮಾಡಿದೆ.

2021ರಲ್ಲಿ ನಡೆದ ಚೊಚ್ಚಲ ವಿಶ್ವ ಟೆಸ್ಟ್‌ ಚಾಂ‍ಪಿಯನ್‌ಶಿಪ್‌ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ ಸೋಲನುಭವಿಸಿದ್ದ ಭಾರತ ರನ್ನರ್-ಅಪ್ ಪ್ರಶಸ್ತಿಗೆ ಭಾಜನವಾಗಿತ್ತು.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

28 seconds ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

43 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

1 hour ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

2 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

2 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 hours ago