ಸಿಡ್ನಿ: ಮುಂಬರುವ ಜೂನ್ 7ರಂದು ಇಂಗ್ಲೆಂಡಿನ ಓವಲ್ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಆಸ್ಟ್ರೇಲಿಯಾದ ತಂಡವನ್ನು ಪ್ರಕಟಿಸಲಾಗಿದೆ.
ಡೇವಿಡ್ ವಾರ್ನರ್ ಸೇರಿದಂತೆ 17 ಜನರ ತಂಡವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿದೆ. ಮೇ 28ರಂದು 15 ಜನರ ತಂಡವನ್ನು ಅಂತಿಮವಾಗಿ ಪ್ರಕಟಿಸಲಾಗುವುದು ಎಂದು ಆಯ್ಕೆ ಸಮಿತಿ ತಿಳಿಸಿದೆ.
ಕಳೆದ ಫೆಬ್ರುವರಿ ತಿಂಗಳಲ್ಲಿ ಭಾರತದ ವಿರುದ್ಧ ನಡೆದ ಆ್ಯಶಸ್ ಟೆಸ್ಟ್ ಸರಣಿಯ ತಂಡವನ್ನೇ ಬಹುತೇಕ ಉಳಿಸಿಕೊಳ್ಳಲಾಗಿದೆ.
ತಂಡ ಇಂತಿದೆ: ಪ್ಯಾಟ್ ಕಮನ್ಸ್ (ನಾಯಕ), ನಥನ್ ಲಯನ್, ಟಾಡ್ ಮುರ್ಫಿ, ಸ್ಕಾಟ್ ಬೋಲಾಂಡ್, ಉಸ್ಮಾನ್ ಖ್ವಾಜಾ, ಕ್ಯಾಮರೂನ್ ಗ್ರೀನ್, ಟ್ರಾವಿಸ್ ಹೆಡ್, ಮಾರ್ನಸ್ ಲಾಬುಷೇನ್, ಸ್ಟೀವ್ ಸ್ಮಿತ್ (ಉಪ ನಾಯಕ), ಡೇವಿಡ್ ವಾರ್ನರ್, ಅಲೆಕ್ಸ್ ಕೇರಿ (ವಿಕೆಟ್ ಕೀಪರ್), ಮರ್ಕಸ್ ಹ್ಯಾರಿಸ್, ಹ್ಯಾಜಲ್ವುಡ್, ಜೋಶ್ ಇಂಕ್ಲಿಶ್, ಮಿಷೆಲ್ ಮಾರ್ಶ್, ಮಿಷೆಲ್ ಸ್ಟಾರ್ಕ್ ಹಾಗೂ ಮ್ಯಾಥಿವ್
ಈ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾದ ಸವಾಲನ್ನು ಎದುರಿಸಲಿದೆ. ಈ ಪಂದ್ಯ ಜೂನ್ 7 ರಿಂದ 11ರ ವರೆಗೆ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ.
2021ರಲ್ಲಿ ನಡೆದ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲನುಭವಿಸಿದ್ದ ಭಾರತ ರನ್ನರ್-ಅಪ್ ಪ್ರಶಸ್ತಿಗೆ ಭಾಜನವಾಗಿತ್ತು.
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…