ಬಾರ್ಬಡೋಸ್ (ವೆಸ್ಟ್ ಇಂಡೀಸ್): ಭಾರತ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ಭಾರತ ತಂಡ ಮೊದಲು ಬ್ಯಾಟ್ ಮಾಡಲಿದೆ. ಅಂದ ಹಾಗೆ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದು, ಸಂಜು ಸ್ಯಾಮ್ಸನ್ ಹಾಗೂ ಅಕ್ಷರ್ ಪಟೇಲ್ ಪ್ಲೇಯಿಂಗ್ XIಗೆ ಮರಳಿದ್ದಾರೆ.
ಇದೇ ಅಂಗಳದಲ್ಲಿ ನಡೆದಿದ್ದ ನಡೆದಿದ್ದ ಮೊದಲನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಇದೀಗ ಎರಡನೇ ಏಕದಿನ ಪಂದ್ಯ ಗೆದ್ದು ಏಕದಿನ ಸರಣಿ ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ.
ಭಾರತ: ಶುಭಮನ್ ಗಿಲ್, ಇಶಾನ್ ಕಿಶನ್(ವಿ.ಕೀ), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್
ವೆಸ್ಟ್ ಇಂಡೀಸ್: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಎಲಿಕ್ ಅಥಾನಾಜೆ, ಶೇಯ್ ಹೋಪ್(ವಿ.ಕೀ), ಶಿಮ್ರಾನ್ ಹೆಟ್ಮಾಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಗುಡಕೇಶ್ ಮೋಥಿ, ಅಲ್ಜಾರಿ ಜೋಸೆಫ್, ಜೇಡನ್ ಸೀಲ್ಸ್
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…