ಟ್ರಿನಿಡಾಡ್: ವೆಸ್ಟ್ಇಂಡೀಸ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 200 ರನ್ ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಅಂತಿಮ ಪಂದ್ಯದಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ಕಲ್ಪಿಸಲಾಗಿತ್ತು. ಹಾರ್ದಿಕ್ ಪಾಂಡ್ಯಾ ಸಾರಾಥ್ಯದಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ ನಿಗಧಿತ 50 ಓವರ್ ಗಳಲ್ಲಿ ಇಶಾನ್ ಕಿಶಾನ್ (77), ಶುಭಮನ್ ಗಿಲ್ (85), ಸಂಜು ಸ್ಯಾಮ್ಸನ್ (51) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ (70*) ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ ಐದು ವಿಕೆಟ್ ನಷ್ಟಕ್ಕೆ 351 ರನ್ ಪೇರಿಸಿತು.
ಬೃಹತ್ ಮೊತ್ತ ಬೆನ್ನಟ್ಟಿದ ವಿಂಡೀಸ್ 35.3 ಓವರ್ಗಳಲ್ಲಿ 151 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. ವಿಂಡೀಸ್ನ ಎಲ್ಲ ಬ್ಯಾಟರ್ಗಳು ವೈಫಲ್ಯವನ್ನು ಅನುಭವಿಸಿದರು. ಭಾರತದ ಪರ ಶಾರ್ದೂಲ್ ಠಾಕೂರ್ ನಾಲ್ಕು, ಮುಕೇಶ್ ಕುಮಾರ್ ಮೂರು ಹಾಗೂ ಕುಲದೀಪ್ ಯಾದವ್ ವಿಕೆಟ್ ಗಳಿಸಿದರು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1ರ ಅಂತರದಲ್ಲಿ ವಶಪಡಿಸಿಕೊಂಡಿದೆ. ಅಲ್ಲದೆ ಟೆಸ್ಟ್ ಬಳಿಕ ಏಕದಿನ ಸರಣಿಯಲ್ಲೂ ಜಯಭೇರಿ ಮೊಳಗಿಸಿದೆ.
ಪಂದ್ಯಶ್ರೇಷ್ಠ: ಶುಭ್ಮನ್ ಗಿಲ್,
ಸರಣಿಶ್ರೇಷ್ಠ: ಇಶಾನ್ ಕಿಸಾನ್
ಭಾರತ ತಂಡವೀಗ ಐದು ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ ಭಾಗವಹಿಸಲಿದೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…