ಟ್ರಿನಿಡಾಡ್: ವೆಸ್ಟ್ಇಂಡೀಸ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 200 ರನ್ ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಅಂತಿಮ ಪಂದ್ಯದಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ಕಲ್ಪಿಸಲಾಗಿತ್ತು. ಹಾರ್ದಿಕ್ ಪಾಂಡ್ಯಾ ಸಾರಾಥ್ಯದಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ ನಿಗಧಿತ 50 ಓವರ್ ಗಳಲ್ಲಿ ಇಶಾನ್ ಕಿಶಾನ್ (77), ಶುಭಮನ್ ಗಿಲ್ (85), ಸಂಜು ಸ್ಯಾಮ್ಸನ್ (51) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ (70*) ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ ಐದು ವಿಕೆಟ್ ನಷ್ಟಕ್ಕೆ 351 ರನ್ ಪೇರಿಸಿತು.
ಬೃಹತ್ ಮೊತ್ತ ಬೆನ್ನಟ್ಟಿದ ವಿಂಡೀಸ್ 35.3 ಓವರ್ಗಳಲ್ಲಿ 151 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. ವಿಂಡೀಸ್ನ ಎಲ್ಲ ಬ್ಯಾಟರ್ಗಳು ವೈಫಲ್ಯವನ್ನು ಅನುಭವಿಸಿದರು. ಭಾರತದ ಪರ ಶಾರ್ದೂಲ್ ಠಾಕೂರ್ ನಾಲ್ಕು, ಮುಕೇಶ್ ಕುಮಾರ್ ಮೂರು ಹಾಗೂ ಕುಲದೀಪ್ ಯಾದವ್ ವಿಕೆಟ್ ಗಳಿಸಿದರು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1ರ ಅಂತರದಲ್ಲಿ ವಶಪಡಿಸಿಕೊಂಡಿದೆ. ಅಲ್ಲದೆ ಟೆಸ್ಟ್ ಬಳಿಕ ಏಕದಿನ ಸರಣಿಯಲ್ಲೂ ಜಯಭೇರಿ ಮೊಳಗಿಸಿದೆ.
ಪಂದ್ಯಶ್ರೇಷ್ಠ: ಶುಭ್ಮನ್ ಗಿಲ್,
ಸರಣಿಶ್ರೇಷ್ಠ: ಇಶಾನ್ ಕಿಸಾನ್
ಭಾರತ ತಂಡವೀಗ ಐದು ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ ಭಾಗವಹಿಸಲಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…