ಟ್ರಿನಿಡಾಡ್: ವೆಸ್ಟ್ಇಂಡೀಸ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 200 ರನ್ ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಅಂತಿಮ ಪಂದ್ಯದಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ಕಲ್ಪಿಸಲಾಗಿತ್ತು. ಹಾರ್ದಿಕ್ ಪಾಂಡ್ಯಾ ಸಾರಾಥ್ಯದಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ ನಿಗಧಿತ 50 ಓವರ್ ಗಳಲ್ಲಿ ಇಶಾನ್ ಕಿಶಾನ್ (77), ಶುಭಮನ್ ಗಿಲ್ (85), ಸಂಜು ಸ್ಯಾಮ್ಸನ್ (51) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ (70*) ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ ಐದು ವಿಕೆಟ್ ನಷ್ಟಕ್ಕೆ 351 ರನ್ ಪೇರಿಸಿತು.
ಬೃಹತ್ ಮೊತ್ತ ಬೆನ್ನಟ್ಟಿದ ವಿಂಡೀಸ್ 35.3 ಓವರ್ಗಳಲ್ಲಿ 151 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. ವಿಂಡೀಸ್ನ ಎಲ್ಲ ಬ್ಯಾಟರ್ಗಳು ವೈಫಲ್ಯವನ್ನು ಅನುಭವಿಸಿದರು. ಭಾರತದ ಪರ ಶಾರ್ದೂಲ್ ಠಾಕೂರ್ ನಾಲ್ಕು, ಮುಕೇಶ್ ಕುಮಾರ್ ಮೂರು ಹಾಗೂ ಕುಲದೀಪ್ ಯಾದವ್ ವಿಕೆಟ್ ಗಳಿಸಿದರು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1ರ ಅಂತರದಲ್ಲಿ ವಶಪಡಿಸಿಕೊಂಡಿದೆ. ಅಲ್ಲದೆ ಟೆಸ್ಟ್ ಬಳಿಕ ಏಕದಿನ ಸರಣಿಯಲ್ಲೂ ಜಯಭೇರಿ ಮೊಳಗಿಸಿದೆ.
ಪಂದ್ಯಶ್ರೇಷ್ಠ: ಶುಭ್ಮನ್ ಗಿಲ್,
ಸರಣಿಶ್ರೇಷ್ಠ: ಇಶಾನ್ ಕಿಸಾನ್
ಭಾರತ ತಂಡವೀಗ ಐದು ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ ಭಾಗವಹಿಸಲಿದೆ.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…