ಟ್ರಿನಿಡಾಡ್: ವೆಸ್ಟ್ಇಂಡೀಸ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 200 ರನ್ ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಅಂತಿಮ ಪಂದ್ಯದಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ಕಲ್ಪಿಸಲಾಗಿತ್ತು. ಹಾರ್ದಿಕ್ ಪಾಂಡ್ಯಾ ಸಾರಾಥ್ಯದಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ ನಿಗಧಿತ 50 ಓವರ್ ಗಳಲ್ಲಿ ಇಶಾನ್ ಕಿಶಾನ್ (77), ಶುಭಮನ್ ಗಿಲ್ (85), ಸಂಜು ಸ್ಯಾಮ್ಸನ್ (51) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ (70*) ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ ಐದು ವಿಕೆಟ್ ನಷ್ಟಕ್ಕೆ 351 ರನ್ ಪೇರಿಸಿತು.
ಬೃಹತ್ ಮೊತ್ತ ಬೆನ್ನಟ್ಟಿದ ವಿಂಡೀಸ್ 35.3 ಓವರ್ಗಳಲ್ಲಿ 151 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. ವಿಂಡೀಸ್ನ ಎಲ್ಲ ಬ್ಯಾಟರ್ಗಳು ವೈಫಲ್ಯವನ್ನು ಅನುಭವಿಸಿದರು. ಭಾರತದ ಪರ ಶಾರ್ದೂಲ್ ಠಾಕೂರ್ ನಾಲ್ಕು, ಮುಕೇಶ್ ಕುಮಾರ್ ಮೂರು ಹಾಗೂ ಕುಲದೀಪ್ ಯಾದವ್ ವಿಕೆಟ್ ಗಳಿಸಿದರು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1ರ ಅಂತರದಲ್ಲಿ ವಶಪಡಿಸಿಕೊಂಡಿದೆ. ಅಲ್ಲದೆ ಟೆಸ್ಟ್ ಬಳಿಕ ಏಕದಿನ ಸರಣಿಯಲ್ಲೂ ಜಯಭೇರಿ ಮೊಳಗಿಸಿದೆ.
ಪಂದ್ಯಶ್ರೇಷ್ಠ: ಶುಭ್ಮನ್ ಗಿಲ್,
ಸರಣಿಶ್ರೇಷ್ಠ: ಇಶಾನ್ ಕಿಸಾನ್
ಭಾರತ ತಂಡವೀಗ ಐದು ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ ಭಾಗವಹಿಸಲಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…