ಲಂಡನ್: ಭಾರತ ಟೆಸ್ಟ್ ತಂಡವು ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಸೋಲನುಭವಿಸಿದೆ. ಈ ಬಾರಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಸೋತ ರೋಹಿತ್ ಪಡೆ ಮತ್ತೆ ಟ್ರೋಫಿಯಿಂದ ವಂಚಿತವಾಯಿತು.
ಪಂದ್ಯದ ಪ್ರದರ್ಶನದ ಬಗ್ಗೆ ಮಾಜಿ ಆಟಗಾರ ಸುನಿಲ್ ಗಾವಸ್ಕರ್ ಅವರು ಕಿಡಿಕಾರಿದ್ದಾರೆ. ಅವರು ತಂಡದ ಕಾರ್ಯ ವಿಧಾನವನ್ನು ಪ್ರಶ್ನಿಸಿದ್ದು, ಪಂದ್ಯದ ಸಮಯದಲ್ಲಿ ತಪ್ಪಾದ ಎಲ್ಲಾ ಅಂಶಗಳ ಮೇಲೆ ಇಡೀ ತಂಡವು ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.
ಆಸ್ಟ್ರೇಲಿಯಾದಂತಹ ದೊಡ್ಡ ತಂಡಗಳ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ತನ್ನ ತಪ್ಪುಗಳನ್ನು ಪುನರಾವರ್ತಿಸುವುದನ್ನು ಮುಂದುವರಿಸಿದರೆ ವೆಸ್ಟ್ ಇಂಡೀಸ್ನಂತಹ ತಂಡಗಳ ವಿರುದ್ಧ ದ್ವಿಪಕ್ಷೀಯ ಸರಣಿಯಲ್ಲಿ ಗೆಲುವು ಸಾಧಿಸಿಯೂ ಏನೂ ಅರ್ಥವಿಲ್ಲ ಎಂದು ಗಾವಸ್ಕರ್ ಹೇಳಿದರು.
“ಹೌದು ವೆಸ್ಟ್ ಇಂಡೀಸ್ ವಿರುದ್ಧ ನಾವು ಎರಡು ಪಂದ್ಯಗಳನ್ನು ಆಡಲಿದ್ದೇವೆ. ಆದರೆ ವೆಸ್ಟ್ ಇಂಡೀಸ್ ವಿಶ್ವದ ಅತ್ಯುತ್ತಮ ತಂಡವಲ್ಲ. ನೀವು ಹೋಗಿ ಅವರನ್ನು 2-0, 3-0 ಅಂತರದಿಂದ ಗೆದ್ದರೂ ಪ್ರಯೋಜನವಿಲ್ಲ. ಏಕೆಂದರೆ ನೀವು ಫೈನಲ್ ಗೆ ಹೋದರೆ ನೀವು ಮತ್ತೆ ಆಸ್ಟ್ರೇಲಿಯಾದಂತಹ ತಂಡವನ್ನು ಎದುರಿಸಬೇಕು. ಆದರೆ ಅದೇ ತಪ್ಪುಗಳನ್ನು ಮಾಡುತ್ತಿದ್ದರೆ, ನೀವು ಟ್ರೋಫಿಯನ್ನು ಹೇಗೆ ಗೆಲ್ಲುತ್ತೀರಿ?” ಎಂದು ಗಾವಸ್ಕರ್ ಹೇಳಿದರು.
ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25…
ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ…
ಪಿರಿಯಾಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್ ಟೆಂಪಲ್ ಸಮೀಪದ ದೊಡ್ಡ ಹರವೆ ಕಾಲೋನಿ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…
ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ…