ಲಂಡನ್: ಭಾರತ ಟೆಸ್ಟ್ ತಂಡವು ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಸೋಲನುಭವಿಸಿದೆ. ಈ ಬಾರಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಸೋತ ರೋಹಿತ್ ಪಡೆ ಮತ್ತೆ ಟ್ರೋಫಿಯಿಂದ ವಂಚಿತವಾಯಿತು.
ಪಂದ್ಯದ ಪ್ರದರ್ಶನದ ಬಗ್ಗೆ ಮಾಜಿ ಆಟಗಾರ ಸುನಿಲ್ ಗಾವಸ್ಕರ್ ಅವರು ಕಿಡಿಕಾರಿದ್ದಾರೆ. ಅವರು ತಂಡದ ಕಾರ್ಯ ವಿಧಾನವನ್ನು ಪ್ರಶ್ನಿಸಿದ್ದು, ಪಂದ್ಯದ ಸಮಯದಲ್ಲಿ ತಪ್ಪಾದ ಎಲ್ಲಾ ಅಂಶಗಳ ಮೇಲೆ ಇಡೀ ತಂಡವು ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.
ಆಸ್ಟ್ರೇಲಿಯಾದಂತಹ ದೊಡ್ಡ ತಂಡಗಳ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ತನ್ನ ತಪ್ಪುಗಳನ್ನು ಪುನರಾವರ್ತಿಸುವುದನ್ನು ಮುಂದುವರಿಸಿದರೆ ವೆಸ್ಟ್ ಇಂಡೀಸ್ನಂತಹ ತಂಡಗಳ ವಿರುದ್ಧ ದ್ವಿಪಕ್ಷೀಯ ಸರಣಿಯಲ್ಲಿ ಗೆಲುವು ಸಾಧಿಸಿಯೂ ಏನೂ ಅರ್ಥವಿಲ್ಲ ಎಂದು ಗಾವಸ್ಕರ್ ಹೇಳಿದರು.
“ಹೌದು ವೆಸ್ಟ್ ಇಂಡೀಸ್ ವಿರುದ್ಧ ನಾವು ಎರಡು ಪಂದ್ಯಗಳನ್ನು ಆಡಲಿದ್ದೇವೆ. ಆದರೆ ವೆಸ್ಟ್ ಇಂಡೀಸ್ ವಿಶ್ವದ ಅತ್ಯುತ್ತಮ ತಂಡವಲ್ಲ. ನೀವು ಹೋಗಿ ಅವರನ್ನು 2-0, 3-0 ಅಂತರದಿಂದ ಗೆದ್ದರೂ ಪ್ರಯೋಜನವಿಲ್ಲ. ಏಕೆಂದರೆ ನೀವು ಫೈನಲ್ ಗೆ ಹೋದರೆ ನೀವು ಮತ್ತೆ ಆಸ್ಟ್ರೇಲಿಯಾದಂತಹ ತಂಡವನ್ನು ಎದುರಿಸಬೇಕು. ಆದರೆ ಅದೇ ತಪ್ಪುಗಳನ್ನು ಮಾಡುತ್ತಿದ್ದರೆ, ನೀವು ಟ್ರೋಫಿಯನ್ನು ಹೇಗೆ ಗೆಲ್ಲುತ್ತೀರಿ?” ಎಂದು ಗಾವಸ್ಕರ್ ಹೇಳಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…