ಕ್ರೀಡೆ

ಭಾರತ-ವೆಸ್ಟ್‌ ಇಂಡೀಸ್‌ ಸರಣಿ: ಟೀಂ ಇಂಡಿಯಾ ವಿರುದ್ಧ ಕಿಡಿಕಾರಿದ ಗಾವಸ್ಕರ್

ಲಂಡನ್: ಭಾರತ ಟೆಸ್ಟ್ ತಂಡವು ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಸೋಲನುಭವಿಸಿದೆ. ಈ ಬಾರಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಸೋತ ರೋಹಿತ್ ಪಡೆ ಮತ್ತೆ ಟ್ರೋಫಿಯಿಂದ ವಂಚಿತವಾಯಿತು.

ಪಂದ್ಯದ ಪ್ರದರ್ಶನದ ಬಗ್ಗೆ ಮಾಜಿ ಆಟಗಾರ ಸುನಿಲ್ ಗಾವಸ್ಕರ್ ಅವರು ಕಿಡಿಕಾರಿದ್ದಾರೆ. ಅವರು ತಂಡದ ಕಾರ್ಯ ವಿಧಾನವನ್ನು ಪ್ರಶ್ನಿಸಿದ್ದು, ಪಂದ್ಯದ ಸಮಯದಲ್ಲಿ ತಪ್ಪಾದ ಎಲ್ಲಾ ಅಂಶಗಳ ಮೇಲೆ ಇಡೀ ತಂಡವು ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಆಸ್ಟ್ರೇಲಿಯಾದಂತಹ ದೊಡ್ಡ ತಂಡಗಳ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ತನ್ನ ತಪ್ಪುಗಳನ್ನು ಪುನರಾವರ್ತಿಸುವುದನ್ನು ಮುಂದುವರಿಸಿದರೆ ವೆಸ್ಟ್ ಇಂಡೀಸ್‌ನಂತಹ ತಂಡಗಳ ವಿರುದ್ಧ ದ್ವಿಪಕ್ಷೀಯ ಸರಣಿಯಲ್ಲಿ ಗೆಲುವು ಸಾಧಿಸಿಯೂ ಏನೂ ಅರ್ಥವಿಲ್ಲ ಎಂದು ಗಾವಸ್ಕರ್ ಹೇಳಿದರು.

“ಹೌದು ವೆಸ್ಟ್ ಇಂಡೀಸ್ ವಿರುದ್ಧ ನಾವು ಎರಡು ಪಂದ್ಯಗಳನ್ನು ಆಡಲಿದ್ದೇವೆ. ಆದರೆ ವೆಸ್ಟ್ ಇಂಡೀಸ್ ವಿಶ್ವದ ಅತ್ಯುತ್ತಮ ತಂಡವಲ್ಲ. ನೀವು ಹೋಗಿ ಅವರನ್ನು 2-0, 3-0 ಅಂತರದಿಂದ ಗೆದ್ದರೂ ಪ್ರಯೋಜನವಿಲ್ಲ. ಏಕೆಂದರೆ ನೀವು ಫೈನಲ್‌ ಗೆ ಹೋದರೆ ನೀವು ಮತ್ತೆ ಆಸ್ಟ್ರೇಲಿಯಾದಂತಹ ತಂಡವನ್ನು ಎದುರಿಸಬೇಕು. ಆದರೆ ಅದೇ ತಪ್ಪುಗಳನ್ನು ಮಾಡುತ್ತಿದ್ದರೆ, ನೀವು ಟ್ರೋಫಿಯನ್ನು ಹೇಗೆ ಗೆಲ್ಲುತ್ತೀರಿ?” ಎಂದು ಗಾವಸ್ಕರ್ ಹೇಳಿದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago