ಟ್ರಿನಿಡಾಡ್ (ವೆಸ್ಟ್ ಇಂಡೀಸ್): ಮೊದಲನೇ ಟೆಸ್ಟ್ ಪಂದ್ಯದಲ್ಲಿ ಪ್ರಾಬಲ್ಯ ಮೆರೆದಿದ್ದ ಭಾರತ ತಂಡದ ಬೌಲರ್ಗಳು ಎರಡನೇ ಟೆಸ್ಟ್ ಪಂದ್ಯದಲ್ಲಿ ಮಖಾಗಿದ್ದಾರೆ. ಇಲ್ಲಿನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡ ಪ್ರವಾಸಿ ಭಾರತ ತಂಡಕ್ಕೆ ಕಠಿಣ ಸವಾಲು ನೀಡುತ್ತಿದೆ.
ಶನಿವಾರ ಒಂದು ವಿಕೆಟ್ ನಷ್ಟಕ್ಕೆ 86 ರನ್ಗಳಿಗೆ ಪ್ರಥಮ ಇನಿಂಗ್ಸ್ ಮುಂದುರಿಸಿದ ವೆಸ್ಟ್ ಇಂಡೀಸ್ ತಂಡ 108 ಓವರ್ಗಳಿಗೆ ಐದು ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿದೆ. ಆ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡಕ್ಕೆ ತಿರುಗೇಟು ನೀಡಿದೆ. ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಕಿರ್ಕ್ ಮೆಕಂಜಿ ಅವರು 32 ರನ್ ಗಳಿಸಿ ಉತ್ತಮ ಆರಂಭ ಪಡೆದಿದ್ದರು. ಆದರೂ ಡೆಬ್ಯೂಟಂಟ್ ಮುಖೇಶ್ ಕುಮಾರ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.
ಆದರೆ, ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್ ಮಾಡುತ್ತಿರುವ ನಾಯಕ ಕ್ರೇಗ್ ಬ್ರಾಥ್ವೇಟ್ ಭಾರತೀಯ ಬೌಲರ್ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದಾರೆ. 75 ರನ್ ಗಳಿಸಿ ಅಶ್ವಿನ್ಗೆ ವಿಕೆಟ್ ಒಪ್ಪಿಸಿದರು. ಬ್ರಾಥ್ವೇಟ್ ಇನಿಂಗ್ಸ್ನಲ್ಲಿ 5 ಬೌಂಡರಿಗಳು ಹಾಗೂ ಒಂದು ಸಿಕ್ಸರ್ ಒಳಗೊಂಡಿದೆ. ಮತ್ತೊಂದು ತುದಿಯಲ್ಲಿ ಅಲಿಕ್ ಅಥಾನಾಜೆ 37 (111) ಇದ್ದಾರೆ.
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಭಾರತ ತಂಡ, 128 ಓವರ್ಗಳಿಗೆ ತನ್ನೆಲ್ಲಾ ವಿಕೆಟ್ಗಳನ್ನು ಕಳೆದುಕೊಂಡು 428 ರನ್ಗಳನ್ನು ಗಳಿಸಿತ್ತು. ಭಾರತ ತಂಡದ ಪರ ವಿರಾಟ್ ಕೊಹ್ಲಿ 121 ರನ್ ಗಳಿಸಿದ್ದರೆ, ನಾಯಕ ರೋಹಿತ್ ಶರ್ಮಾ (80), ಯಶಸ್ವಿ ಜೈಸ್ವಾಲ್ (57), ರವೀಂದ್ರ ಜಡೇಜಾ (61) ಹಾಗೂ ಆರ್ ಅಶ್ವಿನ್ (56) ಅರ್ಧಶತಕಗಳನ್ನು ಸಿಡಿಸಿದ್ದರು.
ಭಾರತ: ಪ್ರಥಮ ಇನಿಂಗ್ಸ್ನಲ್ಲಿ 128 ಓವರ್ಗಳಿಗೆ 438-10 (ವಿರಾಟ್ ಕೊಹ್ಲಿ 121, ರೋಹಿತ್ ಶರ್ಮಾ 80, ರವೀಂದ್ರ ಜಡೇಜಾ 61, ಯಶಸ್ವಿ ಜೈಸ್ವಾಲ್ 57, ಆರ್ ಅಶ್ವಿನ್ 56; ಕೆಮರ್ ರೋಚ್ 104ಕ್ಕೆ 3, ಜೊಮೆಲ್ ವಾರಿಕನ್ 89ಕ್ಕೆ 3, ಜೇಸನ್ ಹೋಲ್ಡರ್ 57ಕ್ಕೆ 2
ವೆಸ್ಟ್ ಇಂಡೀಸ್: ಪ್ರಥಮ ಇನಿಂಗ್ಸ್ನಲ್ಲಿ 108 ಓವರ್ಗಳಿಗೆ 229-5 (ಕ್ರೇಗ್ ಬ್ರಾಥ್ವೇಟ್ 75, ತ್ಯಾಗಿ ನಾರಾಯಣ್ ಚಂದ್ರಪಾಲ್ 33, ಕಿರ್ಕ್ ಮೆಕಂಜಿ 32; ರವೀಂದ್ರ ಜಡೇಜಾ 37ಕ್ಕೆ 2, ಮುಖೇಶ್ ಕುಮಾರ್ 35ಕ್ಕೆ 1, ಆರ್ ಅಶ್ವಿನ್ 61 ಕ್ಕೆ 1)
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…