ಟ್ರಿನಿಡಾಡ್ (ವೆಸ್ಟ್ ಇಂಡೀಸ್): ಮೊದಲನೇ ಟೆಸ್ಟ್ ಪಂದ್ಯದಲ್ಲಿ ಪ್ರಾಬಲ್ಯ ಮೆರೆದಿದ್ದ ಭಾರತ ತಂಡದ ಬೌಲರ್ಗಳು ಎರಡನೇ ಟೆಸ್ಟ್ ಪಂದ್ಯದಲ್ಲಿ ಮಖಾಗಿದ್ದಾರೆ. ಇಲ್ಲಿನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡ ಪ್ರವಾಸಿ ಭಾರತ ತಂಡಕ್ಕೆ ಕಠಿಣ ಸವಾಲು ನೀಡುತ್ತಿದೆ.
ಶನಿವಾರ ಒಂದು ವಿಕೆಟ್ ನಷ್ಟಕ್ಕೆ 86 ರನ್ಗಳಿಗೆ ಪ್ರಥಮ ಇನಿಂಗ್ಸ್ ಮುಂದುರಿಸಿದ ವೆಸ್ಟ್ ಇಂಡೀಸ್ ತಂಡ 108 ಓವರ್ಗಳಿಗೆ ಐದು ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿದೆ. ಆ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡಕ್ಕೆ ತಿರುಗೇಟು ನೀಡಿದೆ. ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಕಿರ್ಕ್ ಮೆಕಂಜಿ ಅವರು 32 ರನ್ ಗಳಿಸಿ ಉತ್ತಮ ಆರಂಭ ಪಡೆದಿದ್ದರು. ಆದರೂ ಡೆಬ್ಯೂಟಂಟ್ ಮುಖೇಶ್ ಕುಮಾರ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.
ಆದರೆ, ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್ ಮಾಡುತ್ತಿರುವ ನಾಯಕ ಕ್ರೇಗ್ ಬ್ರಾಥ್ವೇಟ್ ಭಾರತೀಯ ಬೌಲರ್ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದಾರೆ. 75 ರನ್ ಗಳಿಸಿ ಅಶ್ವಿನ್ಗೆ ವಿಕೆಟ್ ಒಪ್ಪಿಸಿದರು. ಬ್ರಾಥ್ವೇಟ್ ಇನಿಂಗ್ಸ್ನಲ್ಲಿ 5 ಬೌಂಡರಿಗಳು ಹಾಗೂ ಒಂದು ಸಿಕ್ಸರ್ ಒಳಗೊಂಡಿದೆ. ಮತ್ತೊಂದು ತುದಿಯಲ್ಲಿ ಅಲಿಕ್ ಅಥಾನಾಜೆ 37 (111) ಇದ್ದಾರೆ.
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಭಾರತ ತಂಡ, 128 ಓವರ್ಗಳಿಗೆ ತನ್ನೆಲ್ಲಾ ವಿಕೆಟ್ಗಳನ್ನು ಕಳೆದುಕೊಂಡು 428 ರನ್ಗಳನ್ನು ಗಳಿಸಿತ್ತು. ಭಾರತ ತಂಡದ ಪರ ವಿರಾಟ್ ಕೊಹ್ಲಿ 121 ರನ್ ಗಳಿಸಿದ್ದರೆ, ನಾಯಕ ರೋಹಿತ್ ಶರ್ಮಾ (80), ಯಶಸ್ವಿ ಜೈಸ್ವಾಲ್ (57), ರವೀಂದ್ರ ಜಡೇಜಾ (61) ಹಾಗೂ ಆರ್ ಅಶ್ವಿನ್ (56) ಅರ್ಧಶತಕಗಳನ್ನು ಸಿಡಿಸಿದ್ದರು.
ಭಾರತ: ಪ್ರಥಮ ಇನಿಂಗ್ಸ್ನಲ್ಲಿ 128 ಓವರ್ಗಳಿಗೆ 438-10 (ವಿರಾಟ್ ಕೊಹ್ಲಿ 121, ರೋಹಿತ್ ಶರ್ಮಾ 80, ರವೀಂದ್ರ ಜಡೇಜಾ 61, ಯಶಸ್ವಿ ಜೈಸ್ವಾಲ್ 57, ಆರ್ ಅಶ್ವಿನ್ 56; ಕೆಮರ್ ರೋಚ್ 104ಕ್ಕೆ 3, ಜೊಮೆಲ್ ವಾರಿಕನ್ 89ಕ್ಕೆ 3, ಜೇಸನ್ ಹೋಲ್ಡರ್ 57ಕ್ಕೆ 2
ವೆಸ್ಟ್ ಇಂಡೀಸ್: ಪ್ರಥಮ ಇನಿಂಗ್ಸ್ನಲ್ಲಿ 108 ಓವರ್ಗಳಿಗೆ 229-5 (ಕ್ರೇಗ್ ಬ್ರಾಥ್ವೇಟ್ 75, ತ್ಯಾಗಿ ನಾರಾಯಣ್ ಚಂದ್ರಪಾಲ್ 33, ಕಿರ್ಕ್ ಮೆಕಂಜಿ 32; ರವೀಂದ್ರ ಜಡೇಜಾ 37ಕ್ಕೆ 2, ಮುಖೇಶ್ ಕುಮಾರ್ 35ಕ್ಕೆ 1, ಆರ್ ಅಶ್ವಿನ್ 61 ಕ್ಕೆ 1)
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…