ಟ್ರಿನಿಡಾಡ್ (ವೆಸ್ಟ್ ಇಂಡೀಸ್): ಮೊದಲನೇ ಟೆಸ್ಟ್ ಪಂದ್ಯದಲ್ಲಿ ಪ್ರಾಬಲ್ಯ ಮೆರೆದಿದ್ದ ಭಾರತ ತಂಡದ ಬೌಲರ್ಗಳು ಎರಡನೇ ಟೆಸ್ಟ್ ಪಂದ್ಯದಲ್ಲಿ ಮಖಾಗಿದ್ದಾರೆ. ಇಲ್ಲಿನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡ ಪ್ರವಾಸಿ ಭಾರತ ತಂಡಕ್ಕೆ ಕಠಿಣ ಸವಾಲು ನೀಡುತ್ತಿದೆ.
ಶನಿವಾರ ಒಂದು ವಿಕೆಟ್ ನಷ್ಟಕ್ಕೆ 86 ರನ್ಗಳಿಗೆ ಪ್ರಥಮ ಇನಿಂಗ್ಸ್ ಮುಂದುರಿಸಿದ ವೆಸ್ಟ್ ಇಂಡೀಸ್ ತಂಡ 108 ಓವರ್ಗಳಿಗೆ ಐದು ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿದೆ. ಆ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡಕ್ಕೆ ತಿರುಗೇಟು ನೀಡಿದೆ. ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಕಿರ್ಕ್ ಮೆಕಂಜಿ ಅವರು 32 ರನ್ ಗಳಿಸಿ ಉತ್ತಮ ಆರಂಭ ಪಡೆದಿದ್ದರು. ಆದರೂ ಡೆಬ್ಯೂಟಂಟ್ ಮುಖೇಶ್ ಕುಮಾರ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.
ಆದರೆ, ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್ ಮಾಡುತ್ತಿರುವ ನಾಯಕ ಕ್ರೇಗ್ ಬ್ರಾಥ್ವೇಟ್ ಭಾರತೀಯ ಬೌಲರ್ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದಾರೆ. 75 ರನ್ ಗಳಿಸಿ ಅಶ್ವಿನ್ಗೆ ವಿಕೆಟ್ ಒಪ್ಪಿಸಿದರು. ಬ್ರಾಥ್ವೇಟ್ ಇನಿಂಗ್ಸ್ನಲ್ಲಿ 5 ಬೌಂಡರಿಗಳು ಹಾಗೂ ಒಂದು ಸಿಕ್ಸರ್ ಒಳಗೊಂಡಿದೆ. ಮತ್ತೊಂದು ತುದಿಯಲ್ಲಿ ಅಲಿಕ್ ಅಥಾನಾಜೆ 37 (111) ಇದ್ದಾರೆ.
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಭಾರತ ತಂಡ, 128 ಓವರ್ಗಳಿಗೆ ತನ್ನೆಲ್ಲಾ ವಿಕೆಟ್ಗಳನ್ನು ಕಳೆದುಕೊಂಡು 428 ರನ್ಗಳನ್ನು ಗಳಿಸಿತ್ತು. ಭಾರತ ತಂಡದ ಪರ ವಿರಾಟ್ ಕೊಹ್ಲಿ 121 ರನ್ ಗಳಿಸಿದ್ದರೆ, ನಾಯಕ ರೋಹಿತ್ ಶರ್ಮಾ (80), ಯಶಸ್ವಿ ಜೈಸ್ವಾಲ್ (57), ರವೀಂದ್ರ ಜಡೇಜಾ (61) ಹಾಗೂ ಆರ್ ಅಶ್ವಿನ್ (56) ಅರ್ಧಶತಕಗಳನ್ನು ಸಿಡಿಸಿದ್ದರು.
ಭಾರತ: ಪ್ರಥಮ ಇನಿಂಗ್ಸ್ನಲ್ಲಿ 128 ಓವರ್ಗಳಿಗೆ 438-10 (ವಿರಾಟ್ ಕೊಹ್ಲಿ 121, ರೋಹಿತ್ ಶರ್ಮಾ 80, ರವೀಂದ್ರ ಜಡೇಜಾ 61, ಯಶಸ್ವಿ ಜೈಸ್ವಾಲ್ 57, ಆರ್ ಅಶ್ವಿನ್ 56; ಕೆಮರ್ ರೋಚ್ 104ಕ್ಕೆ 3, ಜೊಮೆಲ್ ವಾರಿಕನ್ 89ಕ್ಕೆ 3, ಜೇಸನ್ ಹೋಲ್ಡರ್ 57ಕ್ಕೆ 2
ವೆಸ್ಟ್ ಇಂಡೀಸ್: ಪ್ರಥಮ ಇನಿಂಗ್ಸ್ನಲ್ಲಿ 108 ಓವರ್ಗಳಿಗೆ 229-5 (ಕ್ರೇಗ್ ಬ್ರಾಥ್ವೇಟ್ 75, ತ್ಯಾಗಿ ನಾರಾಯಣ್ ಚಂದ್ರಪಾಲ್ 33, ಕಿರ್ಕ್ ಮೆಕಂಜಿ 32; ರವೀಂದ್ರ ಜಡೇಜಾ 37ಕ್ಕೆ 2, ಮುಖೇಶ್ ಕುಮಾರ್ 35ಕ್ಕೆ 1, ಆರ್ ಅಶ್ವಿನ್ 61 ಕ್ಕೆ 1)
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…