ಕ್ರೀಡೆ

ಕುಸ್ತಿಪಟುಗಳ ಕಣ್ಣೀರಿಗೆ ಭಾರತ ತಕ್ಕ ಉತ್ತರ ನೀಡಲಿದೆ: ಕಾಂಗ್ರೆಸ್

ನವದೆಹಲಿ: ಕುಸ್ತಿಪಟುಗಳ ಹೋರಾಟಕ್ಕೆ ಗೃಹ ಸಚಿವರು ನ್ಯಾಯ ನೀಡುವ ಭರವಸೆ ನೀಡಿದ್ದರು. ಆದರೆ ಇದು ನಿರಾಸೆಯಾಗಿದ್ದು, ದೇಶ ಇದಕ್ಕೆ ತಕ್ಕ ಉತ್ತರ ನೀಡಲಿದೆ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದೆ.

ಡಬ್ಲ್ಯೂಎಫ್‌ಐ ಗೆ ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಮುಖ್ಯಸ್ಥನಾಗಿ ನೇಮಕಗೊಂಡ ಬೆನ್ನಲ್ಲೇ ನೇಮಕ ವಿರೋಧಿಸಿ ಕುಸ್ತಿಪಟು ಸಾಕ್ಷಿ ಮಲ್ಲಿಕ್‌ ಕಣ್ಣೀರು ಸುರಿಸುತ್ತಾ ನಿವೃತ್ತಿ ಘೋಷಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌, ಮಹಿಳಾ ಕುಸ್ತಿಪಟುಗಳ ಮೇಲಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಗೃಹ ಸಚಿವರು ನ್ಯಾಯದ ಭರವಸೆ ನೀಡಿದ್ದರು, ಆದರೇ ಬಿಜೆಪಿ ಆರೋಪಿ ಸಂಸದರನ್ನು ರಕ್ಷಿಸುವುದನ್ನು ಮುಂದುವರೆಸಿದೆ. ನಮ್ಮ ಕುಸ್ತಿಪಟುಗಳ ಕಣ್ಣೀರಿಗೆ ಭಾರತ ತಕ್ಕ ಉತ್ತರ ನೀಡುತ್ತದೆ ಎಂದು ತಮ್ಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ದೇಶದ ಪುತ್ರಿ ಸಾಕ್ಷಿ ಮಲಿಕ್ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಳು. ಸರ್ಕಾರದಲ್ಲಿರುವ ಎಲ್ಲ ಜನರನ್ನು ಭೇಟಿ ಮಾಡಿ, ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರಿಂದ ಲಾಠಿ ಏಟು ತಿಂದರು, ನ್ಯಾಯ ಸಿಗದೆ ಅವರು ನಿವೃತ್ತಿ ತೆಗೆದುಕೊಂಡಿದ್ದಾರೆ ಈ ಕಣ್ಣೀರು ಮೋದಿ ಸರ್ಕಾರದ ಕೊಡುಗೆಯಾಗಿದೆ ಎಂದು ವಿಷಾದಿಸಿದ್ದಾರೆ.

ಸಾಕ್ಷಿ ಮಲ್ಲಿಕ್‌ ಇಂದು “ನಾನು ಸೋತಿದ್ದೇನೆ” ಎಂದು ಹೇಳುತ್ತಿರುವುದು ದುರದೃಷ್ಟಕರ” ಎಂದು ಮಲಿಕ್ ಅಳುವ ವೀಡಿಯೊವನ್ನು ಕಾಂಗ್ರೆಸ್ ಶೇರ್ ಮಾಡಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಗುರುವಾರ ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, WFI ಮಾಜಿ ಮುಖ್ಯಸ್ಥನಿಂದ “ಕಿರುಕುಳ” ಅನುಭವಿಸಿದ ಸಹ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯಕ್ಕಾಗಿ ನಡೆದ ಹೋರಾಟದಲ್ಲಿ ತಾನು ಸೋತಿದ್ದೇನೆ ಎಂದು ಹೇಳಿ ಸಾಕ್ಷಿ ಮಲಿಕ್ ಕುಸ್ತಿಗೆ ನಿವೃತ್ತಿ ಘೋಷಿಸಿದ್ದರು.

andolanait

Recent Posts

ಓದುಗರ ಪತ್ರ: ಭಾರತದಲ್ಲಿ ಹೀಗೆ ಪ್ರತಿಭಟನೆ ಸಾಧ್ಯವೇ?

ದೇಶವೊಂದರ ಮುಖ್ಯಸ್ಥ ಇನ್ನೊಂದು ದೇಶದ ವಿರುದ್ಧ ಯುದ್ಧ ಸಾರಿದ್ದಾರೆ. ಈ ಸಂಘರ್ಷದಲ್ಲಿ ತಮ್ಮ ಜನರೂ ಪ್ರಾಣ ಕಳೆದುಕೊಳ್ಳುತ್ತಾರೆ ಎಂಬುದರ ಅರಿವಿದ್ದರೂ…

14 seconds ago

ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…

3 hours ago

ದೇವರಾಜ ಅರಸು ಸೇತುವೆ ಮೇಲೆ ಸಂಚಾರ ನಿರ್ಬಂಧ

ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…

3 hours ago

2 ತಿಂಗಳಾದರೂ ಕೋಟೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ

ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ  ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…

3 hours ago

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬೇಕು ಸರ್ಜರಿ

ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ…

3 hours ago