ಕ್ರೀಡೆ

ಪ್ರಥಮ ಟೆಸ್ಟ್:‌ ಬಾಂಗ್ಲಾ ವಿರುದ್ಧ ಭಾರತಕ್ಕೆ 188 ರನ್‌ ಜಯ

 

ಚಿತ್ತಗಾಂಗ್:  ಆರಂಭಿಕ ಬ್ಯಾಟರ್‌ ಜಾಕಿರ್‌ ಹಸನ್(‌100ರನ್‌,224 ಎಸೆತ,13 ಬೌಂಡರಿ,1 ಸಿಕ್ಸರ್)‌ ಹಾಗೂ ನಾಯಕ ಶಕೀಬ್‌ ಅಲ್‌ ಹಸನ್(‌84 ರನ್‌,108 ಎಸೆತ,6 ಬೌಂಡರಿ,6ಸಿಕ್ಸರ್)‌ ಹಾಗೂ ಮತ್ತೋರ್ವ ಆರಂಭಿಕ ದಾಂಡಿಗ ನಜ್ಮುಲ್‌ ಹೊಸೈನ್(‌67ರನ್‌,156 ಎಸೆತ,7 ಬೌಂಡರಿ) ಅವರ ಆಟ ಭಾರತದ ವಿರುದ್ಧ ಪ್ರಥಮ ಟೆಸ್ಟ್‌ ಗೆಲ್ಲಲು ಸಾಧ್ಯವಾಗಿಲ್ಲ.ಬದಲಿಗೆ ಭಾರತ ಟೆಸ್ಟ್ ನ ಐದು ದಿನವೂ ಮೇಲುಗೈ ಸಾಧಿಸುವದರೊಂದಿಗೆ ಮೊದಲ ಟೆಸ್ಟ್‌  ನಲ್ಲಿ 188 ರನ್‌ ಗಳ ಅಧಿಕಾರಯುತ ಗೆಲುವು ದಾಖಲಿಸುವ ಮೂಲಕ 1-0ಮುನ್ನಡೆ ಗಳಿಸಿದೆ.

 

   ಚಿತ್ತಗಾಂಗ್‌ ನ ಜಹುರ್‌ ಅಹ್ಮದ್‌ ಚೌಧುರಿ ಸ್ಟೇಡಿಯಂ ನಲ್ಲಿ ಟಾಸ್‌ ಗೆದ್ದ ಭಾರತ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡು ಪ್ರಥಮ ಇನ್ನಿಂಗ್ಸ್‌ ನಲ್ಲಿ 404 ಗೌರವಯುತ ರನ್‌ ಕಲೆ ಹಾಕಿತ್ತು.ಪ್ರತಿಯಾಗಿ ಬಾಂಗ್ಲಾದೇಶ 150 ಗಳಿಸಿ ಆಲೌಟ್‌ ಆಗಿದ್ದು ಫಾಲೋಆನ್‌ ಭೀತಿ ಎದುರಿಸಿತ್ತು.ಈ ಹಂತದಲ್ಲಿ ಭಾರತದ ನಾಯಕ ಕೆ.ಎಲ್.ರಾಹುಲ್‌ ಫಾಲೋಆನ್‌ ಹೇರದೆ ಬ್ಯಾಟಿಂಗ್‌ ಗೆ ನಿರ್ಧರಿಸಿದರು.

 

ವಿಕೆಟ್‌ ಕೀಪರ್‌ ಶುಭಮನ್‌ ಗಿಲ್(‌110) ಹಾಗೂ ಅನುಭವಿ ದಾಂಡಿಗ ಚೇತೇಶ್ವರ ಪೂಜಾರ(ಔಟಾಗದೆ 102)ರನ್‌ ನೆರವಿನಿಂದ 258/2ರನ್‌  ಗೆ ನಾಯಕ ರಾಹುಲ್‌ ಡಿಕ್ಲೇರ್‌ ಘೋಷಣೆ ಮಾಡಿಕೊಂಡು ಬಾಂಗ್ಲಾಗೆ ಗೆಲ್ಲಲು 513ರನ್‌ ಗಳ ಸವಾಲಿನ ಗುರಿ ನೀಡಿದರು. ಮೊದಲ ಇನ್ನಿಂಗ್ಸ್‌ ನಲ್ಲಿ 5 ವಿಕೆಟ್‌ ಕಬಳಿಸಿ ಬಾಂಗ್ಲಾ ಅಲ್ಪ ಮೊತ್ತಕ್ಕೆ ಕುಸಿಯಲು ಪ್ರಮುಖ ಕಾರಣರಾಗಿದ್ದ ಕುಲದೀಪ್‌ ಯಾದವ್‌ ದ್ವಿತೀಯ ಇನ್ನಿಂಗ್ಸ್‌ ನಲ್ಲಿಯೂ ನಾಯಕ ಶಕೀಬ್‌ ಅಲ್‌ ಹಸನ್‌ ನನ್ನು ಕ್ಲೀನ್‌ ಬೋಲ್ಡ್ ಮಾಡುವ ಮೂಲಕ 3 ವಿಕೆಟ್‌ ಕಬಳಿಸಿ ಒಟ್ಟಾರೆ 8ವಿಕೆಟ್‌ ಸಾಧನೆ ಮಾಡುವ ಮೂಲಕ ಪಂದ್ಯ ಶ್ರೇಷ್ಟ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ಮೊದಲ ಇನ್ನಿಂಗ್ಸ್‌ ನಲ್ಲಿ 90ರನ್‌ ಹಾಗೂ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅಜೇಯ 102 ರನ್‌ ಕಲೆಹಾಕಿದ ಚೇತೇಶ್ವರ ಪೂಜಾರ ಅವರೂ ಪ್ರಾಯೋಜಕರ ವಿಶೇಷ ಬಹುಮಾನ ಗಳಿಸಿದರು.

  ಮೊದಲ ಇನ್ನಿಂಗ್ಸ್‌ ನಲ್ಲಿ 3ವಿಕೆಟ್‌ ಗಳಿಸಿದ್ದ‌ ವೇಗದ ಬೌಲರ್ ಮಹಮ್ಮದ್‌ ಸಿರಾಜ್‌ ದ್ವಿತೀಯ ಇನ್ನಿಂಗ್ಸ್‌ ನಲ್ಲಿ ಬಾಂಗ್ಲಾದ 1 ವಿಕೆಟ್‌ ಕೀಳಲು ಮಾತ್ರಾ ಶಕ್ತರಾದರು.ಆದರೆ ಅಕ್ಷರ್‌ ಪಟೇಲ್‌ ದ್ವಿತೀಯ ಇನ್ನಿಂಗ್ಸ್‌ ನಲ್ಲಿ 4 ವಿಕೆಟ್‌ ಸಾಧನೆ ಮಾಡುವದರೊಂದಿಗೆ ಪ್ರಥಮ ಟೆಸ್ಟ್‌ ನಲ್ಲಿ ಒಟ್ಟಾರೆ 5 ವಿಕೆಟ್‌ ಗಳಿಸಿದರು.

ಅಂತಿಮ ದಿನದ ಕೇವಲ ಮುಕ್ಕಾಲು ಗಂಟೆಯ ಆಟದಲ್ಲಿ ಉಳಿದ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡ ಬಾಂಗ್ಲಾ ಕೇವಲ 52 ರನ್‌ ಸೇರಿಸಿ 324ರನ್‌ಗಳಿಗೆ ಆಲೌಟ್‌ ಆಯಿತು.188ರನ್‌ ಗೆಲುವಿನೊಂದಿಗೆ 1-0ಅಂತರದಲ್ಲಿ ಮುನ್ನಡೆದ ಭಾರತ ದ್ವಿತೀಯ ಟೆಸ್ಟ್‌ ಪಂದ್ಯವನ್ನು ಡಿ.22 ರಿಂದ 26ರ ವರೆಗೆ ಆಡಲಿದೆ.               

 

 

 

 

 

andolana

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

6 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

8 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

8 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

8 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

9 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

9 hours ago