ಕ್ರೀಡೆ

ಶ್ರೀಲಂಕಾ ವಿರುದ್ಧದ ಮೊದಲ ಟಿ20 ಗೆದ್ದ ಭಾರತ: ಗಂಭೀರ್‌ ಟೀಮ್‌ ಶುಭಾರಂಭ

ಪಲ್ಲೆಕೆಲೆ: ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ 43 ರನ್‌ಗಳ ಗೆಲುವನ್ನು ದಾಖಲಿಸಿದೆ. ಈ ಮೂಲಕ ಗೌತಮ್‌ ಗಂಭೀರ್‌ ತರಬೇತಿಯ ಭಾರತ ತನ್ನ ಮೊದಲ ಪಂದ್ಯದಲ್ಲೇ ಗೆಲುವಿನ ಖಾತೆ ತೆರೆದಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಶ್ರೀಲಂಕಾ ಫೀಲ್ಡಿಂಗ್‌ ಆರಿಸಿಕೊಂಡು ಭಾರತ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 213 ರನ್‌ ಗಳಿಸಿ ಶ್ರೀಲಂಕಾಗೆ ಗೆಲ್ಲಲು 214 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಶ್ರೀಲಂಕಾ ಭಾರತದ ಬೌಲಿಂಗ್‌ ಮುಂದೆ ಮಂಕಾಗಿ 19.2 ಓವರ್‌ಗಳಲ್ಲಿ 170 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಟೀಮ್‌ ಇಂಡಿಯಾ ಇನ್ನಿಂಗ್ಸ್:‌ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್‌ ಹಾಗೂ ಶುಭ್‌ಮನ್‌ ಗಿಲ್‌ ಉತ್ತಮ ಆರಂಭ ಕಟ್ಟಿಕೊಟ್ಟರು. ಜೈಸ್ವಾಲ್‌ 40 (21) ರನ್‌ ಗಳಿಸಿದರೆ, ಶುಭ್‌ಮನ್ ಗಿಲ್‌ 34 (16) ರನ್‌ ಬಾರಿಸಿದರು. ಇನ್ನುಳಿದಂತೆ ನಾಯಕ ಸೂರ್ಯಕುಮಾರ್‌ ಯಾದವ್‌ 58 (26) ರನ್‌ ಹಾಗೂ ರಿಷಭ್‌ ಪಂತ್‌ 49 (33) ರನ್‌ ಬಾರಿಸಿ ತಂಡಕ್ಕೆ ಆಸರೆಯಾದರು. ಹಾರ್ದಿಕ್‌ ಪಾಂಡ್ಯ 9 (10) ರನ್‌, ರಿಯಾನ್‌ ಪರಾಗ್‌ 7 (6) ರನ್‌, ರಿಂಕು ಸಿಂಗ್‌ 1 (2) ರನ್‌, ಅಕ್ಷರ್‌ ಪಟೇಲ್‌‌ ಅಜೇಯ 10 (5) ರನ್ ಮತ್ತು ಅರ್ಷ್‌ದೀಪ್‌ ಸಿಂಗ್‌ ಅಜೇಯ 1 (1) ರನ್‌ ಗಳಿಸಿದರು.

ಶ್ರೀಲಂಕಾದ ಪರ ಮತೀಶ ಪತಿರಾಣ 4 ವಿಕೆಟ್‌, ವವಿಂದು ಹಸರಂಗ, ಅಸಿತಾ ಫರ್ನಾಂಡೊ ಮತ್ತು ದಿಲ್‌ಶಾನ್‌ ಮಧುಶಂಕ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀಲಂಕಾ ಇನ್ನಿಂಗ್ಸ್: ತಂಡದ ಪರ ಆರಂಭಿಕ ಆಟಗಾರರು ಉತ್ತಮ ಇನ್ನಿಂಗ್ಸ್‌ ಆಡಿದರೂ ಉಳಿದ ಆಟಗಾರರು ರನ್‌ ಗಳಿಸಲು ಪರದಾಡಿದರು. ಪಥಮ್‌ ನಿಸ್ಸಂಕ 79 (48) ರನ್‌, ಕುಸಾಲ್‌ ಮೆಂಡಿಸ್‌ 45 (27) ರನ್‌ ಬಾರಿಸಿದರು. ಇನ್ನುಳಿದಂತೆ ಕುಸಾಲ್‌ ಪೆರೆರಾ 20, ಕಮಿಂದು ಮೆಂಡಿಸ್‌ 12, ಚರಿತ್‌ ಅಸಲಂಕ ಡಕ್‌ಔಟ್‌, ದಸುನ್‌ ಶನಕ ಡಕ್‌ಔಟ್‌, ವನಿಂದು ಹಸರಂಗ 2, ಮಹೀಶ್‌ ತೀಕ್ಷಣ 2, ಮಹೀಸ್‌ ಪತಿರಾಣಾ 6, ದಿಲ್‌ಶಾನ್‌ ಮಧುಶಂಕ ಡಕ್‌ಔಟ್‌ ಮತ್ತು ಅಸಿತಾ ಫೆರ್ನಾಂಡೊ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ಭಾರತದ ಪರ ರಿಯಾನ್‌ ಪರಾಗ್‌ 3 ವಿಕೆಟ್‌, ಅರ್ಷ್‌ದೀಪ್‌ ಸಿಂಗ್‌ ಹಾಗೂ ಅಕ್ಷರ್‌ ಪಟೇಲ್‌ ತಲಾ ಎರಡೆರಡು ವಿಕೆಟ್‌, ರವಿ ಬಿಷ್ಣೋಯಿ ಮತ್ತು ಮೊಹಮ್ಮದ್‌ ಸಿರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

6 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

6 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

6 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

6 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

7 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

8 hours ago