ಕ್ರೀಡೆ

ಶ್ರೀಲಂಕಾ ವಿರುದ್ಧದ ಮೊದಲ ಟಿ20 ಗೆದ್ದ ಭಾರತ: ಗಂಭೀರ್‌ ಟೀಮ್‌ ಶುಭಾರಂಭ

ಪಲ್ಲೆಕೆಲೆ: ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ 43 ರನ್‌ಗಳ ಗೆಲುವನ್ನು ದಾಖಲಿಸಿದೆ. ಈ ಮೂಲಕ ಗೌತಮ್‌ ಗಂಭೀರ್‌ ತರಬೇತಿಯ ಭಾರತ ತನ್ನ ಮೊದಲ ಪಂದ್ಯದಲ್ಲೇ ಗೆಲುವಿನ ಖಾತೆ ತೆರೆದಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಶ್ರೀಲಂಕಾ ಫೀಲ್ಡಿಂಗ್‌ ಆರಿಸಿಕೊಂಡು ಭಾರತ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 213 ರನ್‌ ಗಳಿಸಿ ಶ್ರೀಲಂಕಾಗೆ ಗೆಲ್ಲಲು 214 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಶ್ರೀಲಂಕಾ ಭಾರತದ ಬೌಲಿಂಗ್‌ ಮುಂದೆ ಮಂಕಾಗಿ 19.2 ಓವರ್‌ಗಳಲ್ಲಿ 170 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಟೀಮ್‌ ಇಂಡಿಯಾ ಇನ್ನಿಂಗ್ಸ್:‌ ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್‌ ಹಾಗೂ ಶುಭ್‌ಮನ್‌ ಗಿಲ್‌ ಉತ್ತಮ ಆರಂಭ ಕಟ್ಟಿಕೊಟ್ಟರು. ಜೈಸ್ವಾಲ್‌ 40 (21) ರನ್‌ ಗಳಿಸಿದರೆ, ಶುಭ್‌ಮನ್ ಗಿಲ್‌ 34 (16) ರನ್‌ ಬಾರಿಸಿದರು. ಇನ್ನುಳಿದಂತೆ ನಾಯಕ ಸೂರ್ಯಕುಮಾರ್‌ ಯಾದವ್‌ 58 (26) ರನ್‌ ಹಾಗೂ ರಿಷಭ್‌ ಪಂತ್‌ 49 (33) ರನ್‌ ಬಾರಿಸಿ ತಂಡಕ್ಕೆ ಆಸರೆಯಾದರು. ಹಾರ್ದಿಕ್‌ ಪಾಂಡ್ಯ 9 (10) ರನ್‌, ರಿಯಾನ್‌ ಪರಾಗ್‌ 7 (6) ರನ್‌, ರಿಂಕು ಸಿಂಗ್‌ 1 (2) ರನ್‌, ಅಕ್ಷರ್‌ ಪಟೇಲ್‌‌ ಅಜೇಯ 10 (5) ರನ್ ಮತ್ತು ಅರ್ಷ್‌ದೀಪ್‌ ಸಿಂಗ್‌ ಅಜೇಯ 1 (1) ರನ್‌ ಗಳಿಸಿದರು.

ಶ್ರೀಲಂಕಾದ ಪರ ಮತೀಶ ಪತಿರಾಣ 4 ವಿಕೆಟ್‌, ವವಿಂದು ಹಸರಂಗ, ಅಸಿತಾ ಫರ್ನಾಂಡೊ ಮತ್ತು ದಿಲ್‌ಶಾನ್‌ ಮಧುಶಂಕ ತಲಾ ಒಂದೊಂದು ವಿಕೆಟ್‌ ಪಡೆದರು.

ಶ್ರೀಲಂಕಾ ಇನ್ನಿಂಗ್ಸ್: ತಂಡದ ಪರ ಆರಂಭಿಕ ಆಟಗಾರರು ಉತ್ತಮ ಇನ್ನಿಂಗ್ಸ್‌ ಆಡಿದರೂ ಉಳಿದ ಆಟಗಾರರು ರನ್‌ ಗಳಿಸಲು ಪರದಾಡಿದರು. ಪಥಮ್‌ ನಿಸ್ಸಂಕ 79 (48) ರನ್‌, ಕುಸಾಲ್‌ ಮೆಂಡಿಸ್‌ 45 (27) ರನ್‌ ಬಾರಿಸಿದರು. ಇನ್ನುಳಿದಂತೆ ಕುಸಾಲ್‌ ಪೆರೆರಾ 20, ಕಮಿಂದು ಮೆಂಡಿಸ್‌ 12, ಚರಿತ್‌ ಅಸಲಂಕ ಡಕ್‌ಔಟ್‌, ದಸುನ್‌ ಶನಕ ಡಕ್‌ಔಟ್‌, ವನಿಂದು ಹಸರಂಗ 2, ಮಹೀಶ್‌ ತೀಕ್ಷಣ 2, ಮಹೀಸ್‌ ಪತಿರಾಣಾ 6, ದಿಲ್‌ಶಾನ್‌ ಮಧುಶಂಕ ಡಕ್‌ಔಟ್‌ ಮತ್ತು ಅಸಿತಾ ಫೆರ್ನಾಂಡೊ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

ಭಾರತದ ಪರ ರಿಯಾನ್‌ ಪರಾಗ್‌ 3 ವಿಕೆಟ್‌, ಅರ್ಷ್‌ದೀಪ್‌ ಸಿಂಗ್‌ ಹಾಗೂ ಅಕ್ಷರ್‌ ಪಟೇಲ್‌ ತಲಾ ಎರಡೆರಡು ವಿಕೆಟ್‌, ರವಿ ಬಿಷ್ಣೋಯಿ ಮತ್ತು ಮೊಹಮ್ಮದ್‌ ಸಿರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

8 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

8 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

10 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

10 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

10 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

18 hours ago