ಕ್ರೀಡೆ

ಭಾರತ-ವಿಂಡೀಸ್‌ ಸರಣಿ: ಪ್ರಥಮ ದರ್ಜೆ ಕ್ರಿಕೆಟಿಗರಿಗೆ ಚಾನ್ಸ್ ಕೊಡಿ ಎಂದ ಮಾಂಜ್ರೇಕರ್!

ನವದೆಹಲಿ: ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರಿರುವ ಆಟಗಾರರಿಗೆ ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಟೀಮ್ ಇಂಡಿಯಾವನ್ನು ಬಲಿಷ್ಠಗೊಳಿಸಬೇಕೆಂದು ಬಿಸಿಸಿಐ ಆಯ್ಕೆ ಸಮಿತಿಗೆ ಮಾಜಿ ಕ್ರಿಕೆಟಿಗ ಸಂಜಯ್ ಮಾಂಜ್ರೇಕರ್ ಸಲಹೆ ನೀಡಿದ್ದಾರೆ.

ಲಂಡನ್‌ನ ದಿ ಓವಲ್ ಅಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡ 209 ರನ್‌ಗಳಿಂದ ಸೋಲು ಕಂಡಿತ್ತು. ಆ ಮೂಲಕ ದಶಕದ ನಂತರ ಭಾರತ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿತ್ತು. ಇದರ ಬೆನ್ನಲ್ಲೆ ತಂಡದಲ್ಲಿ ಯುವ ಆಟಗಾರರಿಗೆ ಅವಕಾಶ ಕಲ್ಪಿಸಬೇಕೆಂದು ಹಲವು ಕ್ರಿಕೆಟಿಗರು ಸಲಹೆ ನೀಡಿದ್ದರು.

ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಸಂಜಯ್ ಮಾಂಜ್ರೇಕರ್ ಇಎಸ್‌ಪಿಎನ್ ಕ್ರಿಕ್‌ಇನ್ಫೋ ಜೊತೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿ, ಐಪಿಎಲ್ ಟೂರ್ನಿಯಲ್ಲಿ ಸ್ಫೋಟಕ ಪ್ರದರ್ಶನ ನೀಡಿರುವ ಆಟಗಾರರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡುವುದಕ್ಕಿಂತ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ತಮ್ಮ ಕೌಶಲ ತೋರಿರುವ ಅಭಿಮನ್ಯು ಈಶ್ವರನ್, ಯಶಸ್ವಿ ಜೈಸ್ವಾಲ್, ಸರ್ಫರಾಝ್ ಖಾನ್, ರಜತ್ ಪಾಟಿದಾರ್ ಅವರಂತಹ ಆಟಗಾರರಿಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಕಲ್ಪಿಸಬೇಕು. ಮುಂಬರುವ ವೆಸ್ಟ್ ಇಂಡೀಸ್ ಸರಣಿಯಲ್ಲಿ ನಾನು ಕನಿಷ್ಠ 3 ಯುವ ಬ್ಯಾಟರ್‌ಗಳು ಹಾಗೂ ಅಷ್ಟೇ ಪ್ರಮಾಣದ ವೇಗದ ಬೌಲರ್‌ಗಳನ್ನು ನೋಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಪ್ರಥಮ ದರ್ಜೆ ಕ್ರಿಕೆಟಿಗರಿಗೆ ಅವಕಾಶ ನೀಡಿ: ಮಾಂಜ್ರೇಕರ್‌: “ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸ್ಟೀವನ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಅವರು ಹೆಚ್ಚಾಗಿ ಟಿ20 ಸ್ವರೂಪದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದ್ದರಿಂದ ನಾವು ಅತಿ ಬೇಗ ಸುಸ್ತಾಗುವ ಮತ್ತು ಐಪಿಎಲ್ ಮಾದರಿಯಿಂದ ಟೆಸ್ಟ್‌ಗೆ ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನಿಸುವ ಆಟಗಾರರಿಗಿಂತ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರಿರುವ ಆಟಗಾರರನ್ನು ಹುಡುಕಬೇಕು,

ಆಯ್ಕೆದಾರರು ಭವಿಷ್ಯದ ಆಟಗಾರರನ್ನು ಆಯ್ಕೆ ಮಾಡುವತ್ತ ಗಮನ ಹರಿಸಬೇಕು, ಅಂತಹ ಆಟಗಾರರು ವಿದೇಶಿ ಪಿಚ್‌ಗಳಲ್ಲೂ ಯಶಸ್ಸು ಕಾಣುವಂತಿರಬೇಕು. ವೆಸ್ಟ್ ಇಂಡೀಸ್ ಸರಣಿಯಲ್ಲಿ ನಾನು ಕನಿಷ್ಠ ಮೂವರು ಉದಯೋನ್ಮುಖ ಬ್ಯಾಟರ್‌ಗಳು ಮತ್ತು ಕೆಲವು ಬೌಲರ್‌ಗಳನ್ನು ನೋಡಲು ಇಷ್ಟಪಡುತ್ತೇನೆ, ” ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಹೇಳಿದ್ದಾರೆ.

“ಬ್ಯಾಟಿಂಗ್ ವಿಚಾರದಲ್ಲಿ ಹೇಳುವುದಾದರೆ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಆಟಗಾರರು ತೋರಿರುವ ಪ್ರದರ್ಶನವನ್ನು ಪರಿಗಣಿಸಬೇಕೆ ಹೊರತು ಆತ ಹೊಡೆದಿರುವ ರನ್ ಗಳನ್ನಲ್ಲ. ಪ್ರಥಮ ದರ್ಜೆ ಕ್ರಿಕೆಟ್ ಅನ್ನು ಸೂಕ್ಷ್ಮವಾಗಿ ಗಮನಿಸಿದರೆ ಟೀಮ್ ಇಂಡಿಯಾದಲ್ಲಿ 3,4 ಹಾಗೂ 5ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಲ್ಲ ಉತ್ತಮ ಕೌಶಲ್ಯತೆ ಹೊಂದಿರುವ ಆಟಗಾರರು ಸಿಗುತ್ತಾರೆ, ಅಂತಹ ಆಟಗಾರರಿಗೆ ತಂಡದಲ್ಲಿ ಸ್ಥಾನ ಕಲ್ಪಿಸಿ” ಎಂದು ಖ್ಯಾತ ಕ್ರಿಕೆಟ್ ವಿಶ್ಲೇಷಕ ವಿಶ್ಲೇಷಿಸಿದ್ದಾರೆ.

ಬ್ಯಾಕಪ್ ಬೌಲರ್‌ಗಳನ್ನು ಕರೆ ತನ್ನಿ: ಟೀಮ್ ಇಂಡಿಯಾದ ಬೌಲಿಂಗ್ ವಿಭಾಗ ಬಹಳ ದುರ್ಬಲವಾಗಿದೆ. ಜಸ್‌ಪ್ರೀತ್‌ ಬುಮ್ರಾ, ಪ್ರಸಿಧ್ ಕೃಷ್ಣ ಮತ್ತು ಕೆಲ ಯುವ ಬೌಲರ್‌ಗಳು ಗಾಯದ ಸಮಸ್ಯೆ ಎದುರಿಸುತ್ತಿದ್ದು, ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ. ಉಮೇಶ್ ಯಾದವ್ ನಿವೃತ್ತಿಯ ಹಂತ ತಲುಪಿದ್ದಾರೆ.

“ಕೆಲವು ತಿಂಗಳ ಹಿಂದಷ್ಟೇ ನಾನು ಟೀಮ್ ಇಂಡಿಯಾದ ಬೌಲಿಂಗ್ ವಿಭಾಗದ ಬಗ್ಗೆ ಬಹಳ ಹೆಮ್ಮೆ ಪಡುತ್ತಿದ್ದೆ. ಆದರೆ ಜಸ್‌ಪ್ರೀತ್‌ ಬುಮ್ರಾ, ಪ್ರಸಿಧ್ ಕೃಷ್ಣ ಹಾಗೂ ಕೆಲವು ಉದಯೋನ್ಮುಖ ಬೌಲರ್‌ಗಳು ಗಾಯಗೊಂಡಿದ್ದು, ತಂಡ ನಿಪುಣ ಬೌಲರ್‌ಗಳ ಸಮಸ್ಯೆ ಎದುರಿಸುತ್ತಿದೆ. ಬಿಸಿಸಿಐ ಆಯ್ಕೆ ಸಮಿತಿ ಸದಸ್ಯರು ಟೆಸ್ಟ್ ಸ್ವರೂಪಕ್ಕೆ ಹೊಂದಾಣಿಕೆ ಆಗುವಂತಹ ವೇಗದ ಬೌಲರ್‌ಗಳನ್ನು ಗುರುತಿಸುವ ಅವಶ್ಯಕತೆ ಇದೆ. ಮೂಲ ಬೌಲರ್‌ಗಳು ಗಾಯಗೊಂಡಾಗ ಅವರಷ್ಟೇ ಪರಿಣಾಮಕಾರಿ ಬೌಲಿಂಗ್ ಸಂಯೋಜನೆ ತೋರುವ ಬ್ಯಾಕಪ್ ಬೌಲರ್‌ಗಳ ಅವಶ್ಯಕತೆ ಇದೆ. ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಸ್ಕಾಟ್ ಬೋಲೆಂಡ್‌ ಬ್ಯಾಕಪ್ ಬೌಲರ್ ರೂಪದಲ್ಲಿ ಬಂದು ಪರಿಣಾಮಕಾರಿ ಬೌಲಿಂಗ್ ಪ್ರದರ್ಶಿಸಿದ್ದರು. ಆದರೆ ಟೀಮ್ ಇಂಡಿಯಾ ಉಮೇಶ್ ಯಾದವ್‌ಗೆ ಸ್ಥಾನ ಕಲ್ಪಿಸಿತ್ತು. ಅದು ಸರಿಯಾದ ಕ್ರಮವಲ್ಲ,” ಎಂದು ಸಂಜಯ್ ಮಾಂಜ್ರೇಕರ್ ಹೇಳಿದ್ದಾರೆ.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago