ಕ್ರೀಡೆ

ಆಸೀಸ್‌ ವಿರುದ್ಧದ ಏಕದಿನ ಸರಣಿಗೆ ಭಾರತ ವನಿತೆಯರ ತಂಡ ಪ್ರಕಟ

ಮುಂಬೈ: ಭಾರತೀಯ ಮಹಿಳಾ ಕ್ರಿಕೆಟ್ ಆಯ್ಕೆ ಸಮಿತಿಯು ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದೆ. ಎರಡೂ ಮಾದರಿಗಳಲ್ಲಿಯೂ ನಾಯಕಿಯಾಗಿ ಹರ್ಮನ್‌ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ.

ಸೈಕಾ ಇಶಾಕ್, ಶ್ರೇಯಾಂಕಾ ಪಾಟೀಲ್, ಟಿಟಾಸ್ ಸಾಧು ಮತ್ತು ಮನ್ನತ್ ಕಶ್ಯಪ್ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಏಕದಿನ ತಂಡಕ್ಕೆ ಸೇರ್ಪಡೆ ಮಾಡಲಾಗಿದೆ. ರೇಣುಕಾ ಸಿಂಗ್ ಮತ್ತು ರಿಚಾ ಘೋಷ್ ಕೂಡ ಏಕದಿನ ಕ್ರಿಕೆಟ್‌ಗೆ ಮರಳಿದ್ದಾರೆ. ಉಮಾ ಛೆಟ್ರಿ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಇನ್ನು ಟಿ20 ಕ್ರಿಕೆಟ್ ಬಗ್ಗೆ ಹೇಳುವುದಾದರೆ ಇಂಗ್ಲೆಂಡ್ ವಿರುದ್ಧ 1-2 ಅಂತರದಲ್ಲಿ ಸೋತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಏಕದಿನದಲ್ಲಿಯೂ ಬೌಲಿಂಗ್ ದಾಳಿಯಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲಾಗಿದೆ. ಪೂಜಾ ಪೂನಿಯಾ, ದೇವಿಕಾ ವೈದ್ಯ, ಅಂಜಿಲ್ ಸರ್ವಾನಿ, ಬಿ. ಅನುಷ್ಕಾ, ಮೇಘನಾ ಸಿಂಗ್, ರಾಶಿ ಕನೌಜಿಯಾ ಮತ್ತು ಮೋನಿಕಾ ಪಟೇಲ್‌ ಅವಕಾಶದಿಂದ ವಂಚಿತರಾಗಿದ್ದಾರೆ.

ಟೀಂ ಇಂಡಿಯಾ ಮತ್ತು ಆಸೀಸ್‌ ನಡುವಿನ ಮೂರು ಏಕದಿನ ಪಂದ್ಯಗಳ ಸರಣಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಡಿಸೆಂಬರ್‌ 28 ರಂದು ಮೊದಲ ಪಂದ್ಯ ಆಡಿದರೆ, ಕ್ರಮವಾಗಿ ಡಿಸೆಂಬರ್‌ 30 ಮತ್ತು ಜನವರಿ 2 ರಂದು ಎರಡು ಮತ್ತು ಮೂರನೇ ಪಂದ್ಯಗಳನ್ನು ಆಡಲಿದ್ದಾರೆ.

ತನ್ನ ಅತ್ಯಮೋಘ ಪ್ರದರ್ಶನ ಮೂಲಕ ಮೊಟ್ಟ ಮೊದಲ ಬಾರಿ ಆಸೀಸ್‌ ತಂಡವನ್ನು ಟೆಸ್ಟ್‌ ನಲ್ಲಿ ಸೋಲಿಸಿ ದಾಖಲೆ ಬರೆದಿದ್ದ ಟೀಂ ಇಂಡಿಯಾ ತಂಡ ಇದೀಗ ಮೂರು ಪಂದ್ಯಗಳ ಏಕದಿನ ಸರಣಿ ಗೆಲ್ಲಲು ಸಜ್ಜಾಗಿದೆ.

ಟೀಂ ಇಂಡಿಯಾ ಏಕದಿನ ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ರಿಚಾ ಘೋಷ್ (ವಿ.ಕೀ), ಅಮನ್‌ಜೋತ್ ಕೌರ್, ಶ್ರೇಯಾಂಕ ಪಾಟೀಲ್, ಮನ್ನತ್ ಕಶ್ಯಕ್, ಸೈಕಾ ಇಶಾಕ್, ರೇಣುಕಾ ಸಿಂಗ್, ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಸ್ನೇಹ ರಾಣಾ, ಹರ್ಲೀನ್ ಡಿಯೋಲ್..

ಟೀಂ ಇಂಡಿಯಾ ಟಿ20 ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ರಿಚಾ ಘೋಷ್ (ವಿ.ಕೀ), ಅಮನ್‌ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಕಪ್, ಸೈಕಾ ಇಶಾಕ್, ರೇಣುಕಾ ಸಿಂಗ್. ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಕನಿಕಾ ಅಹುಜಾ, ಮಿನ್ನು ಮಣಿ

andolanait

Recent Posts

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

3 mins ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

14 mins ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

21 mins ago

ಓದುಗರ ಪತ್ರ:  ಗೋಪಾಲಸ್ವಾಮಿ ಬೆಟ್ಟದ ಬಸ್ ಪ್ರಯಾಣ ದರ ಇಳಿಕೆ ಮಾಡಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…

24 mins ago

ಓದುಗರ ಪತ್ರ: ಮಸೂದೆ ಅಂಗೀಕಾರಕ್ಕಷ್ಟೇ ವಿಧಾನಸಭೆ ಅಧಿವೇಶನ ಸೀಮಿತವಾಗದಿರಲಿ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…

27 mins ago

ಥಿಯೇಟರ್‌ಗಳಲ್ಲಿ ಡೆವಿಲ್‌ ಅಬ್ಬರ: ದರ್ಶನ್‌ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್‌ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…

29 mins ago