ಕ್ರೀಡೆ

ಆಸೀಸ್‌ ವಿರುದ್ಧದ ಏಕದಿನ ಸರಣಿಗೆ ಭಾರತ ವನಿತೆಯರ ತಂಡ ಪ್ರಕಟ

ಮುಂಬೈ: ಭಾರತೀಯ ಮಹಿಳಾ ಕ್ರಿಕೆಟ್ ಆಯ್ಕೆ ಸಮಿತಿಯು ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದೆ. ಎರಡೂ ಮಾದರಿಗಳಲ್ಲಿಯೂ ನಾಯಕಿಯಾಗಿ ಹರ್ಮನ್‌ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ.

ಸೈಕಾ ಇಶಾಕ್, ಶ್ರೇಯಾಂಕಾ ಪಾಟೀಲ್, ಟಿಟಾಸ್ ಸಾಧು ಮತ್ತು ಮನ್ನತ್ ಕಶ್ಯಪ್ ಅವರನ್ನು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಏಕದಿನ ತಂಡಕ್ಕೆ ಸೇರ್ಪಡೆ ಮಾಡಲಾಗಿದೆ. ರೇಣುಕಾ ಸಿಂಗ್ ಮತ್ತು ರಿಚಾ ಘೋಷ್ ಕೂಡ ಏಕದಿನ ಕ್ರಿಕೆಟ್‌ಗೆ ಮರಳಿದ್ದಾರೆ. ಉಮಾ ಛೆಟ್ರಿ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಇನ್ನು ಟಿ20 ಕ್ರಿಕೆಟ್ ಬಗ್ಗೆ ಹೇಳುವುದಾದರೆ ಇಂಗ್ಲೆಂಡ್ ವಿರುದ್ಧ 1-2 ಅಂತರದಲ್ಲಿ ಸೋತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಏಕದಿನದಲ್ಲಿಯೂ ಬೌಲಿಂಗ್ ದಾಳಿಯಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲಾಗಿದೆ. ಪೂಜಾ ಪೂನಿಯಾ, ದೇವಿಕಾ ವೈದ್ಯ, ಅಂಜಿಲ್ ಸರ್ವಾನಿ, ಬಿ. ಅನುಷ್ಕಾ, ಮೇಘನಾ ಸಿಂಗ್, ರಾಶಿ ಕನೌಜಿಯಾ ಮತ್ತು ಮೋನಿಕಾ ಪಟೇಲ್‌ ಅವಕಾಶದಿಂದ ವಂಚಿತರಾಗಿದ್ದಾರೆ.

ಟೀಂ ಇಂಡಿಯಾ ಮತ್ತು ಆಸೀಸ್‌ ನಡುವಿನ ಮೂರು ಏಕದಿನ ಪಂದ್ಯಗಳ ಸರಣಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಡಿಸೆಂಬರ್‌ 28 ರಂದು ಮೊದಲ ಪಂದ್ಯ ಆಡಿದರೆ, ಕ್ರಮವಾಗಿ ಡಿಸೆಂಬರ್‌ 30 ಮತ್ತು ಜನವರಿ 2 ರಂದು ಎರಡು ಮತ್ತು ಮೂರನೇ ಪಂದ್ಯಗಳನ್ನು ಆಡಲಿದ್ದಾರೆ.

ತನ್ನ ಅತ್ಯಮೋಘ ಪ್ರದರ್ಶನ ಮೂಲಕ ಮೊಟ್ಟ ಮೊದಲ ಬಾರಿ ಆಸೀಸ್‌ ತಂಡವನ್ನು ಟೆಸ್ಟ್‌ ನಲ್ಲಿ ಸೋಲಿಸಿ ದಾಖಲೆ ಬರೆದಿದ್ದ ಟೀಂ ಇಂಡಿಯಾ ತಂಡ ಇದೀಗ ಮೂರು ಪಂದ್ಯಗಳ ಏಕದಿನ ಸರಣಿ ಗೆಲ್ಲಲು ಸಜ್ಜಾಗಿದೆ.

ಟೀಂ ಇಂಡಿಯಾ ಏಕದಿನ ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ರಿಚಾ ಘೋಷ್ (ವಿ.ಕೀ), ಅಮನ್‌ಜೋತ್ ಕೌರ್, ಶ್ರೇಯಾಂಕ ಪಾಟೀಲ್, ಮನ್ನತ್ ಕಶ್ಯಕ್, ಸೈಕಾ ಇಶಾಕ್, ರೇಣುಕಾ ಸಿಂಗ್, ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಸ್ನೇಹ ರಾಣಾ, ಹರ್ಲೀನ್ ಡಿಯೋಲ್..

ಟೀಂ ಇಂಡಿಯಾ ಟಿ20 ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ರಿಚಾ ಘೋಷ್ (ವಿ.ಕೀ), ಅಮನ್‌ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಕಪ್, ಸೈಕಾ ಇಶಾಕ್, ರೇಣುಕಾ ಸಿಂಗ್. ಠಾಕೂರ್, ಟಿಟಾಸ್ ಸಾಧು, ಪೂಜಾ ವಸ್ತ್ರಾಕರ್, ಕನಿಕಾ ಅಹುಜಾ, ಮಿನ್ನು ಮಣಿ

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

5 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

5 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

5 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

5 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

5 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

5 hours ago