Categories: ಕ್ರೀಡೆ

ಆಸ್ಟ್ರೇಲಿಯಾದ ವಿರುದ್ಧ ಏಕದಿನ ಸರಣಿ: ಭಾರತ ಮಹಿಳಾ ತಂಡ ಪ್ರಕಟ

ಆಸ್ಟ್ರೇಲಿಯಾದಲ್ಲಿ ಮುಂದಿನ ತಿಂಗಳ ಡಿಸೆಂಬರ್.5ರಂದು ನಡೆಯಲಿರುವ ಮಹಿಳಾ ಏಕದಿನ ಸರಣಿಗೆ 16 ಸದಸ್ಯರನ್ನೊಳಗೊಂಡ ಭಾರತ ಮಹಿಳಾ ಕ್ರಿಕೆಟ್‌ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.

ತಂಡದ ನಾಯಕಿಯಾಗಿ ಹರ್ಮನ್‌ ಪ್ರೀತ್‌ ಕೌರ್‌ ಆಯ್ಕೆಯಾಗಿದ್ದು, ಉಪನಾಯಕಿಯಾಗಿ ಸ್ಮೃತಿ ಮಂದಾನ ಕಾಣಿಸಿಕೊಳ್ಳಲಿದ್ದಾರೆ. ವರ್ಷದಿಂದ ಭಾರತ ತಂಡದಿಂದ ದೂರ ಉಳಿದಿದ್ದ ಹರ್ಲೀನ್‌ ಡಿಯೋಲ್‌ ಈ ಸರಣಿಗೆ ಆಯ್ಕೆಯಾಗಿದ್ದು, ಶ್ರೆಯಾಂಕಾ ಪಾಟೀಲ್‌ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ.

ಸೌತ್‌ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಮಿಂಚಿದ್ದ ಶ್ರೆಯಾಂಕಾ ಪಾಟೀಲ್‌, ಒಟ್ಟು 3 ಏಕದಿನ ಪಂದ್ಯಗಳನ್ನಾಡಿದ್ದು 5 ವಿಕೆಟ್‌ ಕಬಳಿಸಿದ್ದಾರೆ.

ಭಾರತದಲ್ಲಿ 2023ರಲ್ಲಿ ಆಸ್ಟ್ರೇಲಿಯಾದ ವಿರುದ್ಧ ಆಡಿದ ಸರಣಿಯೇ ಹರ್ಲೀನ್‌ ಡಿಯೋಲ್‌ ಅವರ ಕೊನೆಯ ಸರಣಿಯಾಗಿತ್ತು. ಇದೀಗ ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತದ ಏಕದಿನ ತಂಡ: ಹರ್ಮನ್‌ ಪ್ರೀತ್‌ ಕೌರ್(ನಾಯಕಿ), ಸ್ನೃತಿ ಮಂದಾನ(ಉಪನಾಯಕಿ), ಪ್ರಿಯಾ ಪುನಿಯಾ, ಜೆಮಿಮಾ ರೊಡ್ರಿಗಸ್‌, ಹರ್ಲೀನ್‌ ಡಿಯೋಲ್‌, ಯಾಸ್ತಿಕಾ ಭಾಟಿಯಾ(ವಿಕೆಟ್‌ ಕೀಪರ್)‌, ರಿಚಾ ಘೋಷ್(ವಿಕೆಟ್‌ ಕೀಪರ್)‌, ತೇಜಲ್‌ ಹಸಬ್ನಿಸ್‌, ದೀಪ್ತಿ ಶರ್ಮಾ, ಮಿನ್ನು ಮಣಿ, ಪ್ರಿಯಾ ಮಿಶ್ರಾ, ರಾಧಾ ಯಾದವ್‌, ಟಿಟಾಸ್‌ ಸಾಧು, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್‌ ಠಾಕೂರ್‌, ಸೈಮಾ ಠಾಕೂರ್.

 

ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

3 mins ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

2 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

3 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

3 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

3 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

3 hours ago