Categories: ಕ್ರೀಡೆ

ಆಸ್ಟ್ರೇಲಿಯಾದ ವಿರುದ್ಧ ಏಕದಿನ ಸರಣಿ: ಭಾರತ ಮಹಿಳಾ ತಂಡ ಪ್ರಕಟ

ಆಸ್ಟ್ರೇಲಿಯಾದಲ್ಲಿ ಮುಂದಿನ ತಿಂಗಳ ಡಿಸೆಂಬರ್.5ರಂದು ನಡೆಯಲಿರುವ ಮಹಿಳಾ ಏಕದಿನ ಸರಣಿಗೆ 16 ಸದಸ್ಯರನ್ನೊಳಗೊಂಡ ಭಾರತ ಮಹಿಳಾ ಕ್ರಿಕೆಟ್‌ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.

ತಂಡದ ನಾಯಕಿಯಾಗಿ ಹರ್ಮನ್‌ ಪ್ರೀತ್‌ ಕೌರ್‌ ಆಯ್ಕೆಯಾಗಿದ್ದು, ಉಪನಾಯಕಿಯಾಗಿ ಸ್ಮೃತಿ ಮಂದಾನ ಕಾಣಿಸಿಕೊಳ್ಳಲಿದ್ದಾರೆ. ವರ್ಷದಿಂದ ಭಾರತ ತಂಡದಿಂದ ದೂರ ಉಳಿದಿದ್ದ ಹರ್ಲೀನ್‌ ಡಿಯೋಲ್‌ ಈ ಸರಣಿಗೆ ಆಯ್ಕೆಯಾಗಿದ್ದು, ಶ್ರೆಯಾಂಕಾ ಪಾಟೀಲ್‌ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ.

ಸೌತ್‌ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಮಿಂಚಿದ್ದ ಶ್ರೆಯಾಂಕಾ ಪಾಟೀಲ್‌, ಒಟ್ಟು 3 ಏಕದಿನ ಪಂದ್ಯಗಳನ್ನಾಡಿದ್ದು 5 ವಿಕೆಟ್‌ ಕಬಳಿಸಿದ್ದಾರೆ.

ಭಾರತದಲ್ಲಿ 2023ರಲ್ಲಿ ಆಸ್ಟ್ರೇಲಿಯಾದ ವಿರುದ್ಧ ಆಡಿದ ಸರಣಿಯೇ ಹರ್ಲೀನ್‌ ಡಿಯೋಲ್‌ ಅವರ ಕೊನೆಯ ಸರಣಿಯಾಗಿತ್ತು. ಇದೀಗ ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತದ ಏಕದಿನ ತಂಡ: ಹರ್ಮನ್‌ ಪ್ರೀತ್‌ ಕೌರ್(ನಾಯಕಿ), ಸ್ನೃತಿ ಮಂದಾನ(ಉಪನಾಯಕಿ), ಪ್ರಿಯಾ ಪುನಿಯಾ, ಜೆಮಿಮಾ ರೊಡ್ರಿಗಸ್‌, ಹರ್ಲೀನ್‌ ಡಿಯೋಲ್‌, ಯಾಸ್ತಿಕಾ ಭಾಟಿಯಾ(ವಿಕೆಟ್‌ ಕೀಪರ್)‌, ರಿಚಾ ಘೋಷ್(ವಿಕೆಟ್‌ ಕೀಪರ್)‌, ತೇಜಲ್‌ ಹಸಬ್ನಿಸ್‌, ದೀಪ್ತಿ ಶರ್ಮಾ, ಮಿನ್ನು ಮಣಿ, ಪ್ರಿಯಾ ಮಿಶ್ರಾ, ರಾಧಾ ಯಾದವ್‌, ಟಿಟಾಸ್‌ ಸಾಧು, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್‌ ಠಾಕೂರ್‌, ಸೈಮಾ ಠಾಕೂರ್.

 

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

3 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

3 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

3 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

4 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

5 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

6 hours ago