ಆಸ್ಟ್ರೇಲಿಯಾದಲ್ಲಿ ಮುಂದಿನ ತಿಂಗಳ ಡಿಸೆಂಬರ್.5ರಂದು ನಡೆಯಲಿರುವ ಮಹಿಳಾ ಏಕದಿನ ಸರಣಿಗೆ 16 ಸದಸ್ಯರನ್ನೊಳಗೊಂಡ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ತಂಡದ ನಾಯಕಿಯಾಗಿ ಹರ್ಮನ್ ಪ್ರೀತ್ ಕೌರ್ ಆಯ್ಕೆಯಾಗಿದ್ದು, ಉಪನಾಯಕಿಯಾಗಿ ಸ್ಮೃತಿ ಮಂದಾನ ಕಾಣಿಸಿಕೊಳ್ಳಲಿದ್ದಾರೆ. ವರ್ಷದಿಂದ ಭಾರತ ತಂಡದಿಂದ ದೂರ ಉಳಿದಿದ್ದ ಹರ್ಲೀನ್ ಡಿಯೋಲ್ ಈ ಸರಣಿಗೆ ಆಯ್ಕೆಯಾಗಿದ್ದು, ಶ್ರೆಯಾಂಕಾ ಪಾಟೀಲ್ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಮಿಂಚಿದ್ದ ಶ್ರೆಯಾಂಕಾ ಪಾಟೀಲ್, ಒಟ್ಟು 3 ಏಕದಿನ ಪಂದ್ಯಗಳನ್ನಾಡಿದ್ದು 5 ವಿಕೆಟ್ ಕಬಳಿಸಿದ್ದಾರೆ.
ಭಾರತದಲ್ಲಿ 2023ರಲ್ಲಿ ಆಸ್ಟ್ರೇಲಿಯಾದ ವಿರುದ್ಧ ಆಡಿದ ಸರಣಿಯೇ ಹರ್ಲೀನ್ ಡಿಯೋಲ್ ಅವರ ಕೊನೆಯ ಸರಣಿಯಾಗಿತ್ತು. ಇದೀಗ ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರತದ ಏಕದಿನ ತಂಡ: ಹರ್ಮನ್ ಪ್ರೀತ್ ಕೌರ್(ನಾಯಕಿ), ಸ್ನೃತಿ ಮಂದಾನ(ಉಪನಾಯಕಿ), ಪ್ರಿಯಾ ಪುನಿಯಾ, ಜೆಮಿಮಾ ರೊಡ್ರಿಗಸ್, ಹರ್ಲೀನ್ ಡಿಯೋಲ್, ಯಾಸ್ತಿಕಾ ಭಾಟಿಯಾ(ವಿಕೆಟ್ ಕೀಪರ್), ರಿಚಾ ಘೋಷ್(ವಿಕೆಟ್ ಕೀಪರ್), ತೇಜಲ್ ಹಸಬ್ನಿಸ್, ದೀಪ್ತಿ ಶರ್ಮಾ, ಮಿನ್ನು ಮಣಿ, ಪ್ರಿಯಾ ಮಿಶ್ರಾ, ರಾಧಾ ಯಾದವ್, ಟಿಟಾಸ್ ಸಾಧು, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ಸೈಮಾ ಠಾಕೂರ್.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…