ಸಿಡ್ನಿ : ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಆಕರ್ಷಕ ಬ್ಯಾಟಿಂಗ್, ಅಶ್ವಿನ್, ಅಕ್ಷರ್ ಹಾಗೂ ಭುವನೇಶ್ವರ್ ಕುಮಾರ್ ಸಂಘಟಿತ ಪ್ರದರ್ಶನದ ನೆರವಿನಿಂದ ನೆದರ್ಲೆಂಡ್ಸ್ ವಿರುದ್ದ ಟೀಂ ಇಂಡಿಯಾ 56 ರನ್ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಟೀಂ ಇಂಡಿಯಾ ನೀಡಿದ್ದ 180 ರನ್ಗಳ ಗುರಿ ಬೆನ್ನತ್ತಿದ ನೆದರ್ಲೆಂಡ್ಸ್ ತಂಡವು 9 ವಿಕೆಟ್ ಕಳೆದುಕೊಂಡು 123 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಸೂಪರ್ 12 ಹಂತರದ ಎರಡನೇ ಗುಂಪಿನಲ್ಲಿ ಎರಡನೇ ಗೆಲುವಿನೊಂದಿಗೆ 4 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟಿದೆ.
ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಭಾರತ ನೀಡಿದ್ದ 180 ರನ್ಗಳ ಸವಾಲಿನ ಗುರಿ ಬೆನ್ನತ್ತಿದ ನೆದರ್ಲೆಂಡ್ಸ್ ತಂಡಕ್ಕೆ ಆರಂಭದಲ್ಲೇ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಶಾಕ್ ನೀಡಿದರು. ಮೊದಲ ಎರಡು ಓವರ್ ಮೇಡನ್ ಮಾಡಿದ ಭುವನೇಶ್ವರ್ ಕುಮಾರ್, ವಿಕ್ರಂಜಿತ್ ಸಿಂಗ್(01) ವಿಕೆಟ್ ಎಗರಿಸುವಲ್ಲಿ ಯಶಸ್ವಿಯಾದರು. ಇದಾದ ಬಳಿಕ ಮ್ಯಾಕ್ಸ್ ಒ ಡೌಡ್(16), ಬಾಸ್ ಡೆ ಲೀಡೆ(16) ಹಾಗೂ ಕಾಲಿನ್ ಆಕೆರ್ಮನ್(17) ಭಾರತೀಯ ಬೌಲರ್ಗಳೆದುರು ಕೊಂಚ ಪ್ರತಿರೋಧ ತೋರಿದರಾದರೂ ಹೆಚ್ಚು ಹೊತ್ತು ಕ್ರೀಸ್ನಲ್ಲಿರಲು ಅಕ್ಷರ್ ಪಟೇಲ್ ಅವಕಾಶ ಮಾಡಿಕೊಡಲಿಲ್ಲ.
ಇನ್ನು ರವಿಚಂದ್ರನ್ ಅಶ್ವಿನ್ ಒಂದೇ ಓವರ್ನಲ್ಲಿ ಕಾಲಿನ್ ಅಕೆರ್ಮನ್ ಹಾಗೂ ಟಾಮ್ ಕೂಪರ್ ಅವರನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಇನ್ನು ಕೊನೆಯಲ್ಲಿ ಟಿಮ್ ಪ್ರಿಂಗಲ್(20) ಹಾಗೂ ಶೆರಿಜ್ ಅಹಮ್ಮದ್ ಭಾರತೀಯ ಬೌಲರ್ಗಳೆದುರು ಕೊಂಚ ಪ್ರತಿರೋಧ ತೋರಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಯಶಸ್ವಿಯಾಗಲಿಲ್ಲ.
ಇನ್ನು ಇದಕ್ಕೂ ಮೊದಲು ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಕನ್ನಡಿಗ ಕೆ ಎಲ್ ರಾಹುಲ್ ನೆದರ್ಲೆಂಡ್ಸ್ ವಿರುದ್ದ ಸಿಡಿಯಬಹುದು ಎನ್ನುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಯಿತು. ಕೆ ಎಲ್ ರಾಹುಲ್ 12 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ ಕೇವಲ 9 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್ನ ಸದ್ದಿನೊಂದಿಗೆ…
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…