ಸಿಡ್ನಿ : ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಆಕರ್ಷಕ ಬ್ಯಾಟಿಂಗ್, ಅಶ್ವಿನ್, ಅಕ್ಷರ್ ಹಾಗೂ ಭುವನೇಶ್ವರ್ ಕುಮಾರ್ ಸಂಘಟಿತ ಪ್ರದರ್ಶನದ ನೆರವಿನಿಂದ ನೆದರ್ಲೆಂಡ್ಸ್ ವಿರುದ್ದ ಟೀಂ ಇಂಡಿಯಾ 56 ರನ್ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಟೀಂ ಇಂಡಿಯಾ ನೀಡಿದ್ದ 180 ರನ್ಗಳ ಗುರಿ ಬೆನ್ನತ್ತಿದ ನೆದರ್ಲೆಂಡ್ಸ್ ತಂಡವು 9 ವಿಕೆಟ್ ಕಳೆದುಕೊಂಡು 123 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಸೂಪರ್ 12 ಹಂತರದ ಎರಡನೇ ಗುಂಪಿನಲ್ಲಿ ಎರಡನೇ ಗೆಲುವಿನೊಂದಿಗೆ 4 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟಿದೆ.
ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಭಾರತ ನೀಡಿದ್ದ 180 ರನ್ಗಳ ಸವಾಲಿನ ಗುರಿ ಬೆನ್ನತ್ತಿದ ನೆದರ್ಲೆಂಡ್ಸ್ ತಂಡಕ್ಕೆ ಆರಂಭದಲ್ಲೇ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಶಾಕ್ ನೀಡಿದರು. ಮೊದಲ ಎರಡು ಓವರ್ ಮೇಡನ್ ಮಾಡಿದ ಭುವನೇಶ್ವರ್ ಕುಮಾರ್, ವಿಕ್ರಂಜಿತ್ ಸಿಂಗ್(01) ವಿಕೆಟ್ ಎಗರಿಸುವಲ್ಲಿ ಯಶಸ್ವಿಯಾದರು. ಇದಾದ ಬಳಿಕ ಮ್ಯಾಕ್ಸ್ ಒ ಡೌಡ್(16), ಬಾಸ್ ಡೆ ಲೀಡೆ(16) ಹಾಗೂ ಕಾಲಿನ್ ಆಕೆರ್ಮನ್(17) ಭಾರತೀಯ ಬೌಲರ್ಗಳೆದುರು ಕೊಂಚ ಪ್ರತಿರೋಧ ತೋರಿದರಾದರೂ ಹೆಚ್ಚು ಹೊತ್ತು ಕ್ರೀಸ್ನಲ್ಲಿರಲು ಅಕ್ಷರ್ ಪಟೇಲ್ ಅವಕಾಶ ಮಾಡಿಕೊಡಲಿಲ್ಲ.
ಇನ್ನು ರವಿಚಂದ್ರನ್ ಅಶ್ವಿನ್ ಒಂದೇ ಓವರ್ನಲ್ಲಿ ಕಾಲಿನ್ ಅಕೆರ್ಮನ್ ಹಾಗೂ ಟಾಮ್ ಕೂಪರ್ ಅವರನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಇನ್ನು ಕೊನೆಯಲ್ಲಿ ಟಿಮ್ ಪ್ರಿಂಗಲ್(20) ಹಾಗೂ ಶೆರಿಜ್ ಅಹಮ್ಮದ್ ಭಾರತೀಯ ಬೌಲರ್ಗಳೆದುರು ಕೊಂಚ ಪ್ರತಿರೋಧ ತೋರಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಯಶಸ್ವಿಯಾಗಲಿಲ್ಲ.
ಇನ್ನು ಇದಕ್ಕೂ ಮೊದಲು ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಕನ್ನಡಿಗ ಕೆ ಎಲ್ ರಾಹುಲ್ ನೆದರ್ಲೆಂಡ್ಸ್ ವಿರುದ್ದ ಸಿಡಿಯಬಹುದು ಎನ್ನುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಯಿತು. ಕೆ ಎಲ್ ರಾಹುಲ್ 12 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ ಕೇವಲ 9 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…