ಸಿಡ್ನಿ : ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಆಕರ್ಷಕ ಬ್ಯಾಟಿಂಗ್, ಅಶ್ವಿನ್, ಅಕ್ಷರ್ ಹಾಗೂ ಭುವನೇಶ್ವರ್ ಕುಮಾರ್ ಸಂಘಟಿತ ಪ್ರದರ್ಶನದ ನೆರವಿನಿಂದ ನೆದರ್ಲೆಂಡ್ಸ್ ವಿರುದ್ದ ಟೀಂ ಇಂಡಿಯಾ 56 ರನ್ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಟೀಂ ಇಂಡಿಯಾ ನೀಡಿದ್ದ 180 ರನ್ಗಳ ಗುರಿ ಬೆನ್ನತ್ತಿದ ನೆದರ್ಲೆಂಡ್ಸ್ ತಂಡವು 9 ವಿಕೆಟ್ ಕಳೆದುಕೊಂಡು 123 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಸೂಪರ್ 12 ಹಂತರದ ಎರಡನೇ ಗುಂಪಿನಲ್ಲಿ ಎರಡನೇ ಗೆಲುವಿನೊಂದಿಗೆ 4 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟಿದೆ.
ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಭಾರತ ನೀಡಿದ್ದ 180 ರನ್ಗಳ ಸವಾಲಿನ ಗುರಿ ಬೆನ್ನತ್ತಿದ ನೆದರ್ಲೆಂಡ್ಸ್ ತಂಡಕ್ಕೆ ಆರಂಭದಲ್ಲೇ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಶಾಕ್ ನೀಡಿದರು. ಮೊದಲ ಎರಡು ಓವರ್ ಮೇಡನ್ ಮಾಡಿದ ಭುವನೇಶ್ವರ್ ಕುಮಾರ್, ವಿಕ್ರಂಜಿತ್ ಸಿಂಗ್(01) ವಿಕೆಟ್ ಎಗರಿಸುವಲ್ಲಿ ಯಶಸ್ವಿಯಾದರು. ಇದಾದ ಬಳಿಕ ಮ್ಯಾಕ್ಸ್ ಒ ಡೌಡ್(16), ಬಾಸ್ ಡೆ ಲೀಡೆ(16) ಹಾಗೂ ಕಾಲಿನ್ ಆಕೆರ್ಮನ್(17) ಭಾರತೀಯ ಬೌಲರ್ಗಳೆದುರು ಕೊಂಚ ಪ್ರತಿರೋಧ ತೋರಿದರಾದರೂ ಹೆಚ್ಚು ಹೊತ್ತು ಕ್ರೀಸ್ನಲ್ಲಿರಲು ಅಕ್ಷರ್ ಪಟೇಲ್ ಅವಕಾಶ ಮಾಡಿಕೊಡಲಿಲ್ಲ.
ಇನ್ನು ರವಿಚಂದ್ರನ್ ಅಶ್ವಿನ್ ಒಂದೇ ಓವರ್ನಲ್ಲಿ ಕಾಲಿನ್ ಅಕೆರ್ಮನ್ ಹಾಗೂ ಟಾಮ್ ಕೂಪರ್ ಅವರನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಇನ್ನು ಕೊನೆಯಲ್ಲಿ ಟಿಮ್ ಪ್ರಿಂಗಲ್(20) ಹಾಗೂ ಶೆರಿಜ್ ಅಹಮ್ಮದ್ ಭಾರತೀಯ ಬೌಲರ್ಗಳೆದುರು ಕೊಂಚ ಪ್ರತಿರೋಧ ತೋರಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಯಶಸ್ವಿಯಾಗಲಿಲ್ಲ.
ಇನ್ನು ಇದಕ್ಕೂ ಮೊದಲು ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಕನ್ನಡಿಗ ಕೆ ಎಲ್ ರಾಹುಲ್ ನೆದರ್ಲೆಂಡ್ಸ್ ವಿರುದ್ದ ಸಿಡಿಯಬಹುದು ಎನ್ನುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಯಿತು. ಕೆ ಎಲ್ ರಾಹುಲ್ 12 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ ಕೇವಲ 9 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…